ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

Team Newsnap
1 Min Read

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಚುನಾವಣಾ ಪ್ರಚಾರಕ್ಕಾಗಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಯಾವುದೇ ನಿರ್ಣಯಗಳನ್ನು ಕೈಗೊಳ್ಳುವಂತಿಲ್ಲ. ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಮಾತನಾಡುವಂತಿಲ್ಲ ಎಂದು ಷರತ್ತು ವಿಧಿಸಿರುವ ಕೋರ್ಟ್ ಕೇವಲ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು ಎಂದು ಹೇಳಿದೆ.

Share This Article
Leave a comment