ಈ ತೀರ್ಪು ರಾಜ್ಯದ ಪಾಲಿಗೆ ಮರಣ ಶಾಸನವಾಗಿದೆ.
ಕರ್ನಾಟಕ, ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಬೆಳಗ್ಗೆ 10:30ಕ್ಕೆ ಅರಂಭಿಸಿದ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠವು ಕಾವೇರಿ ನದಿ ನೀರು ಪ್ರಾಧಿಕಾರ ನೀಡಿದ್ದ ಆದೇಶವನ್ನೇ
ಸುಪ್ರಿಂಕೋರ್ಟ್ನ ಮೂರು ಸದ್ಯಸರ ನ್ಯಾಯಾಪೀಠವು ಎತ್ತಿ ಹಿಡಿದಿದೆ.
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಪ್ರತಿ ದಿನ 5000 ಕ್ಯೂಸೆಕ್ಸ್ ನೀರು ನೀರು ಹರಿಸುವಂತೆ ಸುಪ್ರಿಂಕೋರ್ಟ್ ನೀಡಿರುವ ಆದೇಶವನ್ನು ಪಾಲಿಸಿದರೆ ರಾಜ್ಯ ರೈತರನ್ನು ದುಸ್ಥಿತಿಗೆ ತಳ್ಳಿದಂತಾಗುತ್ತದೆ
ತೀರ್ಪು ಬರುವವರೆಗೂ 10 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ತಮಿಳುನಾಡು ವಾದ ಮಂಡಿಸುತ್ತಿದೆ.”ಆದರೆ ನಮ್ಮಲ್ಲಿನ ರೈತರಿಗೆ ನೀರು ಇಲ್ಲ. ಈ ಬಾರಿ ಮಳೆ ಕೈಕೊಟ್ಟಿದೆ.ಇಲ್ಲಿನ ಜಲಾಶಯಗಳಲ್ಲಿ ನೀರಿನ ಕೊರತೆ ಉಂಟಾಗಿದೆ.ಅಷ್ಟು ನೀರು ಬಿಡುವುದಕ್ಕೆ ಆಗುವುದಿಲ್ಲ, ಸಾಮಾನ್ಯ ವರ್ಷದಂತೆ ನೀರು ಬಿಡಲು ತಮಿಳುನಾಡು ಕೇಳುತ್ತಿದೆ” ಎಂದು ಕರ್ನಾಟಕದ ವಾದವಾಗಿದೆ.ಕರ್ನಾಟಕ ಪರ ವಕೀಲ ಶ್ಯಾಮ್ ವಾದ ಮಂಡಿಸಿದರು.
ಇದೇ ವೇಳೆ ಕಾವೇರಿ ನದಿ ನೀರು ಮಧ್ಯಪ್ರವೇಶಕ್ಕೆ ಸುಪ್ರಿಂಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ನಾವು ಪ್ರಕರಣ ಸಂಬಂಧ ಮಧ್ಯಪ್ರವೇಶ ಮಾಡುವುದಕ್ಕೆ ಸಾಧ್ಯವಿಲ್ಲ, ನಾವು ಕೇವಲ ಹದಿನೈದು ದಿನಕ್ಕೆ ಒಂದು ಸಾರಿ ಪರಿಸ್ಥಿತಿಯನ್ನು ಅವಲೋಕಮಾಡುತ್ತೇವೆ ಅಂತ ಹೇಳಿದೆ.
ಇದೇ ವೇಳೆ ನ್ಯಾಯಾಪೀಠದ ಮುಂದೆ ತಮಿಳುನಾಡು ಪರ ವಕೀಲರಾದ ರೋಹಟಗಿ ಅವರು ವಾದ ಮಂಡನೆ ಮಾಡಿ, ನಮಗೆ ಕಡಿಮೆ ಪ್ರಮಾಣದಲ್ಲಿ ನೀರು ಬಿಡುಲಾಗುತ್ತಿದೆ ಅಂತ ಹೇಳಿದರು.ತಲಕಾವೇರಿ ‘ತೀರ್ಥೋದ್ಭವ’ ಅ.17ರಂದು ಮಧ್ಯರಾತ್ರಿ 1.27ಕ್ಕೆ
ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಇಂದು ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು ಹಾಗೂ ಸಂಸದರೊಂದಿಗೆ ಭೇಟಿ ಮಾಡಿ ಚರ್ಚಿಸಿದರು.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment