Main News

ಚೌಕಾಬಾರಕ್ಕೆ ಗುಡ್ ಬೈ – ಸಚಿವ ಸುರೇಶ್ ಕುಮಾರ್ ಸಲಹೆ ಪಾಲಿಸಿದ ಚಾಲಕರು

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು, ನಿರ್ದೇಶನಾಲಯಗಳು, ಅಕಾಡೆಮಿಗಳಲ್ಲಿ ಕೆಲಸ ಮಾಡುವ ವಾಹನ ಚಾಲಕರು ಸಮಯ ಕಳೆಯಲು ಚೌಕಬಾರ ಆಡುತ್ತಾರೆ. ಆದರೆ ಈ ಆಟ ಬಿಟ್ಟು ದಿನ ಪತ್ರಿಕೆ ಓದುವ ಹವ್ಯಾಸ ರೂಪಿಸಿಕೊಂಡಿದ್ದಾರೆ.

ನಗರದ ಅಂಬೇಡ್ಕರ್ ವೀಧಿಯ ವಿಶ್ವೇಶ್ವರಯ್ಯ ಟವರ್ಸ್ ಆವರಣದಲ್ಲಿ ಮುಖ್ಯದ್ವಾರದ ಸನಿಹದಲ್ಲಿ ನಿತ್ಯವೂ ವಿರಾಮದ ಸಮಯದಲ್ಲಿ ಚೌಕಾಬಾರ ಆಡುತ್ತಾ ಕುಳಿತು ಕೊಳ್ಳುತ್ತಿದ್ದ ವಿವಿಧ ಅಧಿಕಾರಿಗಳ ಕಾರು ಚಾಲಕರಿಗೆ ಅನುಕೂಲವಾಗುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ಮೇರೆಗೆ ಗ್ರಂಥಾಲಯ ಇಲಾಖೆಯಿಂದ ಪತ್ರಿಕೆಗಳನ್ನು ಒದಗಿಸಲಾಗಿದೆ.

ಇತ್ತೀಚಿಗೆ ವಿಶ್ವೇಶ್ವರಯ್ಯ ಟವರ್ಸ್ ನ 4ನೇ ಮಹಡಿಯಲ್ಲಿರುವ ಗ್ರಂಥಾಲಯ ಇಲಾಖೆ ಕಚೇರಿಯಲ್ಲಿನ ಸಭೆಗೆ ಆಗಮಿಸಿದ್ದ ಪ್ರಾಥಮಿಕ ಸುರೇಶ್ ಕುಮಾರ್ ಭೇಟಿ ನೀಡಿ ಸಭೆ ಮುಗಿಸಿ ಹೊರಬಂದು ಕಾರಿನಲ್ಲಿ ತೆರಳುತ್ತಿದ್ದರು.

ಆಗ ಎಡಗಡೆ ಕಣ್ಣು ಹಾಯಿಸಿದಾಗ ಹತ್ತಾರು ಮಂದಿ ಗುಂಪೂಗೂಡಿದ್ದನ್ನು ನೋಡಿ ಕಾರಿನಿಂದ ಇಳಿದು ಸ್ಥಳಕ್ಕೆ ಭೇಟಿ ನೀಡಿದರು. ಆಗ ಕಾರು ಚಾಲಕರೆಲ್ಲ ಚೌಕಾಬಾರ ಆಡುವುದರಲ್ಲಿ ತೊಡಗಿದ್ದರು.
ಕಾರು ಚಾಲಕರು ಚೌಕಾಬಾರ ಆಡುವುದನ್ನು ಗಮನಿಸಿ ಅವರನ್ನು ಮಾತನಾಡಿಸಿದ ಸಚಿವರು ಗ್ರಂಥಾಲಯ ಇಲಾಖೆ ನಿರ್ದೇಶಕರನ್ನು ಕರೆದು, ಚಾಲಕರಿಗೆ ವಿರಾಮ ದೊರೆತಾಗ ಓದಲು ಅನುಕೂಲವಾಗುವಂತೆ ಈ ಸ್ಥಳಕ್ಕೆ ಪತ್ರಿಕೆಗಳನ್ನು ಪೂರೈಸಲು ಸೂಚಿಸಿದರು.
ಸಚಿವರ ನಿರ್ದೇಶನದಂತೆ ಗ್ರಂಥಾಲಯ ಇಲಾಖೆ ನಿರ್ದೇಶಕರು ಚಾಲಕರು ಚೌಕಾಬಾರ ಆಡುತ್ತಿದ್ದ ಸ್ಥಳಕ್ಕೆ ಪತ್ರಿಕೆಗಳನ್ನು ಪೂರೈಸುತ್ತಿದ್ದಾರೆ. ಚಾಲಕರೆಲ್ಲ ಚೌಕಾಬಾರ ಆಟದ ಬದಲಿಗೆ ಪತ್ರಿಕೆ ಓದುವುದರಲ್ಲಿ ಮಗ್ನರಾಗಿದ್ದಾರೆ.

ಈಗ ಚೌಕಾಬಾರ ಆಡುವ ಸ್ಥಳ ವಾಚಾನಾಲಯವಾಗಿ ಮಾರ್ಪಟ್ಟಿರುವುದು ಚಾಲಕರಿಗೆ ಖುಷಿಯಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024