ಪೋಲಿಸ್ ದಂಪತಿ ನೇಣಿಗೆ ಶರಣು: ಇಲಾಖೆಗೆ ಮತ್ತೊಂದು ಆಘಾತ

Team Newsnap
1 Min Read

ಸಿಐಡಿ ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮಕ್ಕಳ ಅಗಲಿಲ್ಲ ಎಂಬ ಕಾರಣಕ್ಕಾಗಿ ಪೊಲೀಸ್​ ದಂಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಶುಕ್ರವಾರ ಜರುಗಿದೆ.

ಪೊಲೀಸ್ ಪೇದೆಗಳಾದ ಶೀಲಾ ಹಾಗೂ ಹೆಚ್.ಸಿ. ಸುರೇಶ್ ನೇಣಿಗೆ ಶರಣಾಗಿದ್ದಾರೆ.

ಕಳೆದ ಹತ್ತು ವರ್ಷದ ಹಿಂದೆ ಶೀಲಾ‌ ಮತ್ತು ಸುರೇಶ್​ ಮದುವೆಯಾಗಿದ್ದರು. ಇಬ್ಬರದ್ದು ಪ್ರೇಮ ವಿವಾಹ ಮಾಡಿಕೊಂಡರು.

ಶೀಲಾ ಮೂಲತಃ ಚಿಕ್ಕಮಗಳೂರಿನವರು. ಸುರೇಶ್ ಕೋಲಾರ ಮೂಲದವರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್​ ತನಿಖೆ ನಂತರ ಕಾರಣ ತಿಳಿಯಲಿದೆ.

ಶೀಲಾ ಕೊತ್ತನೂರು ಠಾಣೆಯಲ್ಲಿ ಹಾಗೂ ಸುರೇಶ್​ ಸಂಪಿಗೆಹಳ್ಳಿ ಎಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಪ್ರಕರಣ ಸಂಬಂಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment