January 28, 2026

Newsnap Kannada

The World at your finger tips!

WhatsApp Image 2024 11 19 at 3.23.45 PM

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ

Spread the love

ದಕ್ಷಿಣ ಕನ್ನಡ :ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಬ್ಯಾಟರ್ ಸೂರ್ಯಕುಮಾರ್ ಯಾದವ್, ತಮ್ಮ ಪತ್ನಿ ಸಮೇತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಸೂರ್ಯಕುಮಾರ್ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ, ಮತ್ತು ಅಭಿಷೇಕ ನೆರವೇರಿಸಿದ್ದು , ದಂಪತಿಗೆ ದೇವಸ್ಥಾನದ ವತಿಯಿಂದ ವಿಶೇಷ ಗೌರವಾರ್ಪಣೆ ಮಾಡಲಾಯಿತು.

ತೀರ್ಥ ಕ್ಷೇತ್ರದ ಮಹತ್ವ:
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ನಾಗರಾಧನೆಗೆ ಪ್ರಸಿದ್ಧವಾಗಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರನ್ನು ಆಕರ್ಷಿಸುತ್ತದೆ. ಜನಪ್ರಿಯ ಕ್ರಿಕೆಟರ್ ಆಗಿರುವ ಸೂರ್ಯಕುಮಾರ್ ಯಾದವ್ ಈ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸ್ಥಳೀಯ ಭಕ್ತರ ಗಮನ ಸೆಳೆದಿದೆ.ಇದನ್ನು ಓದಿ -ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ

ಈ ಭೇಟಿ ಕ್ರಿಕೆಟ್ ಅಭಿಮಾನಿಗಳಿಗೂ, ಭಕ್ತರಿಗೂ ವಿಶೇಷ ಸಂಭ್ರಮ ತಂದಿದೆ.

error: Content is protected !!