ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಗೋಲ್ಡ್ ಮೆಡಲ್ ಪಡೆದ ಮಂಡ್ಯದ ಗೃಹಿಣಿಯೊಬರು ಅನುಮಾನಾಸ್ಪದವಾಗಿ ಮೈಸೂರಿನಲ್ಲಿ ಸಾವನ್ನಪ್ಪಿದ ಘಟನೆ ಜರುಗಿದೆ.
ಆಶಾ ಮೃತ ಗೃಹಿಣಿ. ಮಳವಳ್ಳಿಯ ನಾಗಾಪ್ರಸಾದ್ ಎಂಬಾತನನ್ನು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿ ಆಶಾ ಎಂಟು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.
ಸದ್ಯ ಮೈಸೂರಿನಲ್ಲಿ ಆಶಾ, ನಾಗಾಪ್ರಸಾದ್ ವಾಸವಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡನಿಂದ ನಿರಂತರ ಕಿರುಕುಳ ನೀಡಲಾಗ್ತಿತ್ತು ಎಂದು ಆಶಾ ಕುಂಟುಂಬಸ್ಥರು ಆರೋಪಿಸಿದ್ದಾರೆ.
ಈ ಬಗ್ಗೆ ಎರಡ್ಮೂರು ಬಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪ್ರಕರಣ ವಿಚ್ಛೇದನದ ಹಂತಕ್ಕೆ ಹೋಗಿತ್ತು. ನಂತರ ಕೌಟುಂಬಿಕ ಕೋರ್ಟ್ ನಲ್ಲಿ ರಾಜಿ ಮಾಡಲಾಗಿತ್ತು. ಇದಾದ ಮೇಲು ಪತಿಯಿಂದ ಕಿರುಕುಳ ಮುಂದುವರೆದಿದ್ದು ಹಣಕ್ಕಾಗಿ ದಿನೇ ದಿನೇ ಟಾರ್ಚರ್ ನೀಡ್ತಿದ್ದ ಎನ್ನಲಾಗಿದೆ.
ಕುಟುಂಬದವರಿಗೆ ನಿನ್ನೆಯಷ್ಟೇ ಕರೆ ಮಾಡಿ ಗಂಡನ ಮನೆ ಬಿಟ್ಟು ಪಿಜಿ ಯಲ್ಲಿರುತ್ತೇನೆ ಎಂದು ಆಶಾ ಹೇಳಿದ್ದಳಂತೆ.
ಅದರ ಬೆನ್ನಲ್ಲೇ ಗಂಡ ನಾಗಪ್ರಸಾದ್ ಆಶಾ ಪೋಷಕರಿಗೆ ಕರೆ ಮಾಡಿ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಿದ್ದಾನಂತೆ. ಇದರಿಂದ ಅನುಮಾನ ವ್ಯಕ್ತಪಡಿಸಿರುವ ಆಶಾ ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದಾರೆ.
ಮೈಸೂರಿನ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment