ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

Team Newsnap
1 Min Read

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ.

ಈ ಸಂಬಂಧ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಪ್ರಜ್ವಲ್‌ ಅಮಾನತಿಗೆ ನಿನ್ನೆಯೇ ನಿರ್ಧಾರ ಮಾಡಲಾಗಿದೆ.

ತಪ್ಪು ಯಾರೇ ಮಾಡಿದ್ರೂ ತಪ್ಪು. SIT ತನಿಖೆಯ ವರದಿ ಬಂದ ಬಳಿಕ ಎಲ್ಲವನ್ನೂ ಮಾತಾಡ್ತೀನಿ ಎಂದರು.

ಪೆನ್‍ಡ್ರೈವ್ ಸುಳಿಯಲ್ಲಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಹಾಸನ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಆತ ಮನುಷ್ಯನಲ್ಲ, ಮನುಷ್ಯ ಕುಲದಲ್ಲಿ ಹುಟ್ಟಿಲ್ಲ. ದೇವೇಗೌಡರ ಮೊಮ್ಮಗ ಅಂತ ಬಿಡಬಾರದು. ಈ ಕೂಡಲೇ ಪ್ರಜ್ವಲ್ ಬಂಧಿಸುವಂತೆ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.

Share This Article
Leave a comment