ದೊಡ್ಡಬಳ್ಳಾಪುರ : ಒಂದೇ ಕುಟುಂಬದ ನಾಲ್ಕು ಮಂದಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಲೆಯರಹಳ್ಳಿ ಬಳಿ ಕಳೆದ ರಾತ್ರಿ ಜರುಗಿದೆ.
ದೊಡ್ಡಬಳ್ಳಾಪುರದ ಬಳಿ ಕೋಳಿಫಾರಂನಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಅಲ್ಲಿಪುರ ಮೂಲದ ಕಾಲೇ ಸರೇರಾ, (60) ಲಕ್ಷ್ಮಿ ಸರೇರಾ(50) ಉಷಾ ಸರೇರಾ (40) ಮತ್ತು ಪೂಲ್ ಸರೇರಾ (16) ಮೃತದೇಹ ಶೇಡ್ ನಲ್ಲಿ ಪತ್ತೆಯಾಗಿದೆ.
ಕಳೆದ ರಾತ್ರಿ ಚಳಿಯಿಂದ ತಪ್ಪಿಸಿಕೊಳ್ಳಲು ಇದ್ದಿಲಿನ ಪೆಟ್ಟಿಗೆಗೆ ಬೆಂಕಿ ಹಚ್ಚಿ ಮಲಗಿದ್ದಾರೆ. ನಂತರ ಹೊಗೆ ಹೆಚ್ಚಾಗಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕಳೆದ 10 ದಿನಗಳ ಹಿಂದಷ್ಟೇ ಕಾಲೇ ಸರೇರಾ ಕುಟುಂಬ ಮೋಹನ್ ಎಂಬುವರಿಗೆ ಸೇರಿದ ಕೋಳಿಫಾರಂನಲ್ಲಿ ಕೆಲಸಕ್ಕೆ ಸೇರಿದ್ದರು.ಹೆಂಡತಿ ಶವದ ಮುಂದೆಯೇ ಜೀವ ಬಿಟ್ಟ ಗಂಡ: ಸಾವಿನಲ್ಲೂ ಒಂದಾದ ಜೋಡಿ
ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು