ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Team Newsnap
1 Min Read

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ.

ರಂಗನಾಥ್ ನಾಯಕ್ (27) ಚಿಕ್ಕಬಳ್ಳಾಪುರ ಮೂಲದವನಾಗಿದ್ದು ,ತಿಂಗಳುಗಳ ಹಿಂದೆ ಬಸ್ ಆ್ಯಕ್ಸಿಡೆಂಟ್ ನಲ್ಲಿ ರಂಗನಾಥ್ ಗಾಯಗೊಂಡಿದ್ದನು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆಯುರ್ವೇದಿಕ್ ಔಷಧಿ ಪಡೆಯುತ್ತಿದ್ದನು.

ರಂಗನಾಥ್ ಬುಧವಾರ ಬೆಳಗ್ಗೆ ತಿಂಡಿ ನಂತರ ರೂಮ್ ಲಾಕ್ ಹಾಕಿಕೊಂಡಿದ್ದು ,ಮಧ್ಯಾಹ್ನ ರೂಮೇಟ್ ಹೋಗಿ ಬಾಗಿಲು ಬಡಿದಾಗ ತೆಗೆದಿಲ್ಲ. ಹೀಗಾಗಿ ಬಾಗಿಲು ಒಡೆದು ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಇನ್ನು ರಂಗನಾಥ್ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ .2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು ,ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment