Karnataka

ಸನ್ಯಾಸತ್ವಕ್ಕೆ ಗುಡ್ ಬೈ ಹೇಳಿ ಯುವತಿಯೊಂದಿಗೆ ಪರಾರಿಯಾದ ಸ್ವಾಮೀಜಿ

ಮಠ ಮತ್ತು ಸನ್ಯಾಸತ್ವ ಅಂದರೆ ಒಂದು ಧರ್ಮ ಸಮುದಾಯಕ್ಕೆ ದಾರಿ ತೋರಿಸುವ, ಮಾರ್ಗದರ್ಶನ ಮಾಡುವ ಕೇಂದ್ರ.ಇಲ್ಲಿನ ಸ್ವಾಮೀಜಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಇರುತ್ತದೆ.ಇದನ್ನು ಓದಿ –ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಪಟ್ಟಿಯಲ್ಲಿ ವಿವರ

ಪೀಠ ಅಲಂಕರಿಸುವ ಸ್ವಾಮೀಜಿ ಸಮಾಜಕ್ಕೆ ಮಾದರಿಯಾಗಿ ಬದುಕಬೇಕು.ಆದರೆ ರಾಮನಗರದ ಮಾಗಡಿ ತಾಲೂಕಿನ ಸೋಲೂರಿನಗದ್ದುಗೆ ಮಠದಲ್ಲಿ ಎಲ್ಲವೂ ಅಯೋಮಯವಾಗಿದೆ.

ಈ ಮಠದ ಶಿವಮಹಂತ ಸ್ವಾಮೀಜಿಯವರು ಇದೀಗ ಸನ್ಯಾಸತ್ವ ತ್ಯಜಿಸಿ, ಮಠ ಬಿಟ್ಟು ನಾಪತ್ತೆಯಾಗಿದ್ದಾರೆ. ಜೊತೆಗೆ ಪತ್ರವೊಂದನ್ನು ಬರೆದಿಟ್ಟು, ತಾವು ಮಠ ಬಿಟ್ಟು ಹೋಗಲು ಕಾರಣವಾದ ವಿಚಾರವನ್ನು ತಿಳಿಸಿದ್ದಾರೆ. ಸ್ವಾಮೀಜಿ ನಾಪತ್ತೆಯಾಗಿರುವ ವಿಚಾರ ತಿಳಿದು ಮಠದ ಭಕ್ತರು, ಗ್ರಾಮಸ್ಥರೆಲ್ಲ ಆಘಾತಕ್ಕೆ ಒಳಗಾಗಿದ್ದಾರೆ.

ಸನ್ಯಾಸತ್ವ ತ್ಯಜಿಸಿ ನಾಪತ್ತೆಯಾದ ಸ್ವಾಮೀಜಿ

ಸೋಲೂರಿನ ಗದ್ದುಗೆ ಮಠದ ಶಿವಮಹಂತ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇವರ ಮೂಲ ಅಥವಾ ಗೃಹಸ್ಥಾಶ್ರಮದ ಹೆಸರು ಹರೀಶ್. ಇದೀಗ ಗದ್ದುಗೆ ಮಠದಲ್ಲಿದ್ದ ಶಿವಮಹಂತ ಸ್ವಾಮೀಜಿ ಸನ್ಯಾಸತ್ವ ತ್ಯಜಿಸಿ, ಪತ್ರ ಬರೆದಿಟ್ಟು ಮಠದಿಂದ ನಾಪತ್ತೆಯಾಗಿದ್ದಾರೆ.

ಹುಡುಗಿ ಜೊತೆಗೆ ನಾಪತ್ತೆಯಾದರಾ ಸ್ವಾಮೀಜಿ?

ಸ್ವಾಮೀಜಿ ಯುವತಿಯೊಬ್ಬಳ ಜೊತೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಮದುವೆಯಾಗಿದ್ದವಳ ಜೊತೆ ಸ್ವಾಮೀಜಿ ತೆರಳಿದ್ದಾರೆ ಅಂತ ಹೇಳಲಾಗುತ್ತಿದೆ.

ಸನ್ಯಾಸತ್ವ ಇಷ್ಟ ಇಲ್ಲ ಅಂತ ಪತ್ರ ಬರೆದು ನಾಪತ್ತೆ

ಹರೀಶ್ ಅಂತ ಇವರು ಮೂಲ ಹೆಸರಾಗಿದ್ದು, ಸ್ವಾಮೀಜಿಯಾದ ಮೇಲೆ ಶಿವಮಹಂತ ಸ್ವಾಮೀಜಿ ಅಂತ ಹೆಸರು ನೀಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದಷ್ಟೇ ಮಠದ ಪೀಠಾಧಿಪತಿಯಾಗಿ ನೇಮಕಗೊಂಡಿದ್ದರು. ಇದೀಗ ಇವರು ಮದುವೆಯಾಗಿ ಒಂದೂವರೆ ತಿಂಗಳಾಗಿದ್ದ ಯುವತಿ ಒಬ್ಬಳ ಜೊತೆಗೆ ಎಸ್ಕೇಪ್ ಆಗಿದ್ದಾರೆ ಎಂಬ ವದಂತಿ ಹಬ್ಬಿದೆ. ಇನ್ನು ಸ್ವಾಮೀಜಿ ಮಠದಿಂದ ತೆರಳುವ ಮುನ್ನ ಪತ್ರವೊಂದನ್ನು ಬರೆದಿದ್ದಾರೆ.

ಸ್ವಾಮೀಜಿ ಬರೆದ ಪತ್ರ

ನನ್ನನ್ನು ಹುಡುಕಬೇಡಿ ಅಂತ ಮನವಿ

ತನಗೆ ಸನ್ಯಾಸತ್ವ ಇಷ್ಟವಿಲ್ಲ, ನಾನು ಮಠ ಬಿಟ್ಟು ಹೋಡಿಹೋಗ್ತಿದ್ದೀನಿ ಅಂತ ಪತ್ರ ಬರೆದಿಟ್ಟು ಪರಾರಿಯಾಗಿದ್ದಾರೆ. ನಾನು ಯಾರ ಕೈಗೂ ಸಿಗುವುದಿಲ್ಲ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಹೇಳಿದ್ದಾರೆ.

ಸ್ವಾಮೀಜಿ ಬರೆದ ಪತ್ರದಲ್ಲಿ ಏನಿದೆ?

ನಾನು ನನ್ನ ಸ್ವಾಮೀಜಿ ಜೀವನ ತ್ಯಜಿಸುತ್ತಿದ್ದೇನೆ. ಕಾರಣ ನನ್ನ ಜೀವನದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಈ ಕಾರಣಕ್ಕಾಗಿ ನಾನು ಇದನ್ನೆಲ್ಲಾ ಬಿಟ್ಟು ದೂರ ಹೋಗುತ್ತಿದ್ದೇನೆ. ನನಗೆ ಈ ಜೀವನ ಜಿಗುಪ್ಸೆ ಉಂಟು ಮಾಡಿದೆ. ಈ ಕಾರಣ ನಿಮಗೆಲ್ಲ ಗೊತ್ತಿದೆ ಅಂತ ಭಾವಿಸುತ್ತೇನೆ. ದಯವಿಟ್ಟು ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ. ನಾನು ಕಾವಿ ಬಟ್ಟೆಯನ್ನು ತ್ಯಜಿಸಿದ ಮೇಲೆ ಮತ್ತೆಂದೂ ತೊಡುವುದಿಲ್ಲ. ಹಾಗೇನಾದರೂ ನನ್ನನ್ನು ಹುಡುಕುವ ಪ್ರಯತ್ನ ಮಾಡಿದರೆ ನನ್ನ ಹೆಣವನ್ನು ನೀವು ನೋಡುತ್ತೀರಿ ಅಂತ ಪತ್ರದಲ್ಲಿ ಸ್ವಾಮೀಜಿ ಎಚ್ಚರಿಸಿದ್ದಾರೆ.

ಈ ಹಿಂದೆ ಯುವತಿಯನ್ನು ಪ್ರೀತಿಸುತ್ತಿದ್ದ ಸ್ವಾಮೀಜಿ

ಈ ಹಿಂದೆ ಇದೇ ಸ್ವಾಮೀಜಿ ಬೇರೆ ಮಠದಲ್ಲಿರುವಾಗ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಆಕೆಗೆ ಕಳೆದ ಒಂದೂವರೆ ತಿಂಗಳ ಹಿಂದೆ ಮದುವೆಯಾಗಿತ್ತು ಅಂತ ಹೇಳಲಾಗುತ್ತಿದೆ. ಅದೇ ಹುಡುಗಿ ಜೊತೆ ಶಿವಮಹಂತಸ್ವಾಮಿ ಅಲಿಯಾಸ್ ಹರೀಶ್ ಪರಾರಿಯಾಗಿರುವ ಶಂಕೆ ಇದೆ. ಇದೀಗ ಕುದೂರು ಠಾಣೆಯಲ್ಲಿ ಸ್ವಾಮೀಜಿ ಮಿಸ್ಸಿಂಗ್ ಕೇಸ್ ದಾಖಲಾಗಿದೆ.

Team Newsnap
Leave a Comment

Recent Posts

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024