ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್ ಕಬ್ಬಿಗೆ ೨೯೦ರೂ. ಬೆಲೆ ಹೆಚ್ಚಿಸಿದೆ. ಕಬ್ಬು ಬೆಳೆಗಾರರಿಗೆ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ(ಎಫ್ಆರ್ಪಿ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಕೇಂದ್ರ ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ, ಜವಳಿ ಸಚಿವ ಪಿಯೂಷ್ ಗೋಯಲ್ ಈ ವಿಷಯ ತಿಳಿಸಿದರು. ಇದು ಕಬ್ಬು ಬೆಳೆಗಾರರಿಗೆ ಅನುಮೋದಿಸಿದ ಎಫ್ಆರ್ಪಿಯ ಅತ್ಯಧಿಕವಾಗಿದೆ. ಈ ಬೆಲೆ ಹೆಚ್ಚಳದಿಂದ ೫ ಕೋಟಿ ಕಬ್ಬು ಬೆಳೆಗಾರರಿಗೆ ಮತ್ತು ಅವರ ಅವಲಂಬಿತರಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.
ಎಫ್ಆರ್ಪಿಯ ಹೆಚ್ಚಳದಿಂದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ೫ ಲಕ್ಷ ಕಾರ್ಮಿಕರಿಗೆ ಹಾಗೂ ಸಂಬಂಧ ಪೂರಕ ಚಟುವಟಿಕೆಗಳಿಗೆ ಸಹಾಯವಾಗುತ್ತದೆ ಎಂದು ಗೋಯಲ್ ವಿವರಿಸಿದರು.
ಮುಂದಿನ ಮಾರುಕಟ್ಟೆ ವರ್ಷಕ್ಕೆ ಈ ಹೊಸ ದರ ಅನ್ವಯವಾಗಲಿದೆ. ಬರುವ ಅಕ್ಟೋಬರ್ನಿಂದ ಕಬ್ಬು ರೈತನ ಮಾರುಕಟ್ಟೆ ವರ್ಷ ಪ್ರಾರಂಭವಾಗಲಿದೆ. ಹೊಸ ಬೆಲೆಯು ಶೇ. ೧೦ರಷ್ಟು ಚೇತರಿಕೆಯನ್ನು ಆಧರಿಸಿರುತ್ತದೆ. ಒಬ್ಬ ಬೆಳೆಗಾರ ಶೇ. ೯.೫ಕ್ಕಿಂತ ಕಡಿಮೆ ಚೇತರಿಕೆ ಹೊಂದಿದ್ದರೂ ಪ್ರತಿ ಕ್ವಿಂಟಲ್ಗೆ ೨೭೫ ರೂ. ನ್ಯಾಯೋಚಿತ ಹಾಗೂ ಲಾಭದಾಯಕ ಬೆಲೆ ಆಗಿರುತ್ತದೆ ಎಂದರು.
ಸಕ್ಕರೆ ಉತ್ಪಾದನೆಯಲ್ಲಿ ಚೇತರಿಕೆ ಕಂಡಿದ್ದು, ಕಳೆದ ವರ್ಷ ರಪ್ತು ಪ್ರಮಾಣ ದಾಖಲೆಯಮಟ್ಟದ್ದಾಗಿತ್ತು. ಸುಮಾರು ೭೦ ಲಕ್ಷ ಟನ್ ರಫ್ತು ಒಪ್ಪಂದವಾಗಿದೆ ಎಂದು ಸಚಿವರು ಹೇಳಿದರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment