ಮೈಸೂರು ಜಿಲ್ಲೆಗೆ ಕೋವಿಡ್ ನಿರ್ವಹಣೆಗೆ 41 ಕೋಟಿ ರು ಹಣ ಬಂದಿದೆ. ಅದರಲ್ಲಿ 39 ಕೋಟಿ ರು ಖರ್ಚಾಗಿದೆ ಅಂತ ಹೇಳಿದ್ದಿರಿ. 39 ಕೋಟಿ ರು ಯಾರಿಗೆ ಕೊಟ್ಟಿದ್ದೀರಿ, ಯಾವುದಕ್ಕೆ ಖರ್ಚು ಮಾಡಿದ್ದೀರಿ ಎಂಬುದಕ್ಕೆ ಜಿಲ್ಲಾಧಿಕಾರಿ ಹಾಗೂ ಡಿಎಚ್ಓ ಮೊದಲು ಲೆಕ್ಕ ಕೊಡಲಿ ಎಂದು ಸಂಸದ ಪ್ರತಾಪ ಸಿಂಹ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪಸಿಂಹ, ಡಿ.ಸಿ ರೋಹಿಣಿ ಸಿಂಧೂರಿ ವಿರುದ್ದ ಗುಡುಗಿ, ಜನ ಕೊರೊನಾ ಸಂಕಷ್ಟದಲ್ಲಿರುವಾಗ ಈಜುಕೊಳ ಬೇಕಿತ್ತಾ ನಿಮಗೆ? ಔಷಧಿ ಖರೀದಿಗೆ ಕಾನೂನು ಅಡ್ಡ ಬರುತ್ತೆ. 28 ಲಕ್ಷ ಖರ್ಚು ಮಾಡಿ ಸ್ಮಿಮ್ಮಿಂಗ್ ಪೂಲ್ ನಿರ್ಮಿಸೋಕೆ ಕಾನೂನು ಅಡ್ಡ ಬರಲಿಲ್ವಾ ಎಂದು ಪ್ರಶ್ನಿಸಿದ್ದಾರೆ.
ಜನರನ್ನು ರಕ್ಷಿಸೋದು ಬಿಟ್ಟು ಮೋಜು ಮಸ್ತಿಗೆ ಉತ್ತೇಜನ ಕೊಡುವ ಇಂತಹ ಅಧಿಕಾರಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಹರಿಹಾಯ್ದರು.
ಕೋವಿಡ್ ಸಂಕಷ್ಟಕ್ಕೆ ಸ್ಪಂದಿಸಲೆಂದೇ ಪ್ರಧಾನಿಯವರು ದೇಶಾದ್ಯಂತ 1 ಲಕ್ಷ ವೆಂಟಿಲೇಟರ್ ಕೊಟ್ಟಿದ್ದಾರೆ. ಆದರೆ ಈಗಲೂ ಕೂಡ ಇಲ್ಲದ ಸಬೂಬು ಹೇಳಿ ಅಳವಡಿಸದೆ ಹಾಗೆ ಇಟ್ಟಿದ್ದಾರೆ. ಇವುಗಳನ್ನೆಲ್ಲಾ ಕೇಳಿದ್ರೆ ತಪ್ಪಾ? ಪಿಎಂ ಕೇರ್ಸ್ನಿಂದ ಬಂದ 40 ವೆಂಟಿಲೇಟರ್ಗಳನ್ನ ಇನ್ನೂ ಅಳವಡಿಕೆ ಮಾಡಿಲ್ಲ. ಇದು ಜಿಲ್ಲಾಧಿಕಾರಿಗಳ ವೈಫಲ್ಯತೆ ತೋರಿಸುತ್ತೆ. ಇದನ್ನ ಕೇಳಿದ್ರೆ ಜನಪ್ರತಿನಿಧಿಗಳು, ಅಧಿಕಾರಿಗಳ ಮಧ್ಯೆ ಅಸಹಕಾರ ಹೇಗಾಗುತ್ತೆ? ಎಂದು ಪ್ರಶ್ನಿಸಿದ್ರು.
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
This website uses cookies.
Leave a Comment