ಟಿ20 ವಿಶ್ವಕಪ್ಗೆ ಪ್ರಕಟಿಸಲಾಗಿದೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಮಾತ್ರ ಮಾಡಲಾಗಿದೆ.
ಈ ಮೊದಲು 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ರನ್ನು ಟೀಮ್ ಇಂಡಿಯಾ ಆಯ್ಕೆಯ ಸಮಿತಿ ಕೈಬಿಟ್ಟಿದೆ.
ಅಕ್ಷರ್ ಸ್ಥಾನಕ್ಕೆ ವೇಗಿ ಶಾರ್ದೂಲ್ ಠಾಕೂರ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಸೆಪ್ಟೆಂಬರ್ 8ರಂದು ಬಿಸಿಸಿಐ ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ ತಂಡದಲ್ಲಿ ಬದಲಾವಣೆ ಮಾಡಲು ಐಸಿಸಿ, ಅಕ್ಟೋಬರ್ 15ರವರೆಗೂ ಅವಕಾಶ ನೀಡಿತ್ತು. ಹೀಗಾಗಿ ಬಿಸಿಸಿಐ ಮತ್ತು ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ, ಅಕ್ಷರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ಗೆ ಮಣೆ ಹಾಕಿ, ಅಂತಿಮ ತಂಡವನ್ನು ಪ್ರಕಟಿಸಿದೆ.
ಭಾರತದ ತಂಡ ಹೀಗಿದೆ :
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
ಸ್ಟ್ಯಾಂಡ್ ಬೈ ಆಟಗಾರರು:
ಅಕ್ಷರ್ ಪಟೇಲ್, ದೀಪಕ್ ಚಹರ್, ಶ್ರೇಯಸ್ ಅಯ್ಯರ್
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ