ತಹಶೀಲ್ದಾರ್ ಕೋರ್ಟ್ಗೆ ವಿಚಾರಣೆಗೆ ಬಂದಿದ್ದವರ ಮೇಲೆ ತಹಶೀಲ್ದಾರ್ ಸೇರಿ 5 ಜನ ಹಲ್ಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ತಹಶೀಲ್ದಾರ್ ನವೀನ್ ಹುಲ್ಲೂರ ಹಲ್ಲೆ ಮಾಡಿದ ಆರೋಪಿ.
ನವಲಗುಂದ ತಾಲೂಕ್ ತಹಶೀಲ್ದಾರ್ ಹುಲ್ಲೂರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕೋರ್ಟ್ಗೆ ಮಲ್ಲಿಕಾರ್ಜುನ ಹಂಪಿಹೋಳಿ ಬಂದಿದ್ದರು.
ಈ ವೇಳೆ ಮಲ್ಲಿಕಾರ್ಜುನ ಮೇಲೆ ತಹಶೀಲ್ದಾರ್ ಸೇರಿದಂತೆ 5 ಜನ ಹಲ್ಲೆ ನಡೆಸಿದ್ದಾರೆ. ಜೊತೆಗೆ ಮಲ್ಲಿಕಾರ್ಜುನ ಸಹೋದರ ಸಿದ್ದಲಿಂಗಪ್ಪ ಹಾಗೂ ಆತನ ಸಹೋದರಿಗೂ ತಹಶೀಲ್ದಾರ್ ಬೂಟುಗಾಲಿನಿಂದ ಒದ್ದಿದ್ದರು.
ಹಲ್ಲೆಗೆ ಒಳಗಾದ ಮಲ್ಲಿಕಾರ್ಜುನ ಹಾಗೂ ಸಿದ್ಧಲಿಂಗಪ್ಪನ ವಿರುದ್ಧ ನವಲಗುಂದ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದರು.
ಆದರೆ ತಹಶೀಲ್ದಾರ್ ಸೇರಿ 5 ಜನ ಮಲ್ಲಿಕಾರ್ಜುನ ಹಾಗೂ ಸಿದ್ಧಲಿಂಗಪ್ಪನಿಗೆ ಹಲ್ಲೆ ಮಾಡಿದವರನ್ನು ವಿಚಾರಣೆಗೆ ಒಳಪಡಿಸದೇ ಹಾಗೆಯೇ ಬಿಟ್ಟು ಕಳುಹಿಸಿದ್ದರು.
ಮಲ್ಲಿಕಾರ್ಜುನ ಸಹೋದರಿ ಗೀತಾ ಹಂಪಿಹೋಳಿ ಬೂಟುಗಾಲಿನಿಂದ ಒದ್ದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅಲ್ಲದೆ ಈ ಕುರಿತು ಠಾಣೆಯಲ್ಲಿ ತಹಶೀಲ್ದಾರ್ ವಿರುದ್ಧ ದೂರು ಕೊಡಲು ಹೋದಾಗ ಇನ್ಸ್ಪೆಕ್ಟರ್ ಧಮ್ಕಿ ಹಾಕಿದ್ದಾರೆ ಎಂದು ಗೀತಾ ಆರೋಪಿಸಿದ್ದಾರೆ.
ಎಸ್ಪಿ ಕರೆ ಮಾಡಿದ ನಂತರ ಬೆಳಗಿನ ಜಾವ ಪ್ರಕರಣದ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು