ತಾಜ್ ಮಹಲ್ ನಲ್ಲಿ ಬಾಂಬ್ ಇರುವುದಾಗಿ ಅನಾಮಧೇಯ ಕರೆಯಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ತಾಜ್ ಮಹಲ್ ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಪ್ರೇಮಸೌಧ ಆಗ್ರಾದ ತಾಜ್ ಮಹಲ್ ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಭದ್ರತಾ ಸಿಬ್ಬಂದಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾರೆ. ತಕ್ಷಣ ಪೋಲೀಸ್ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಪ್ರವಾಸಿಗರನ್ನು ಹಾಗೂ ತಾಜ್ ಮಹಲ್ ನಲ್ಲಿರುವ ಭದ್ರತಾ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ, ತಾಜ್ ಮಹಲ್ ನ ಎಲ್ಲಾ ದ್ವಾರಗಳನ್ನು ಬಂದ್ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆ ಮಾಡಿದ ಮೇಲೆ ಹುಸಿ ಬಾಂಬ್ ಎಂದು ಖಚಿತವಾದ ನಂತರ 1 ಗಂಟೆ ವೇಳೆಗೆ ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಯಿತು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ