ತಲಕಾಡು ಪಂಚಲಿಂಗ ದರ್ಶನ ಈ ಬಾರಿ ಡಿ.10ರಿಂದ 19ರವರೆಗೆ ಭಕ್ತರಿಗೆ ಅವಕಾಶ ಸಿಗಲಿದೆ.
ಪಂಚಲಿಂಗ ದರ್ಶನಕ್ಕೆ ದಸರಾದಲ್ಲಿ ಉಳಿದ ಅನುದಾನವನ್ನು ಬಳಸಿಕೊಳ್ಳಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಪಂಚಲಿಂಗ ದರ್ಶನಕ್ಕೆ ದಸರಾದಲ್ಲಿ ಉಳಿದಿರುವ 7.8 ಕೋಟಿ ರೂ. ಅನುದಾನದಲ್ಲಿ ಪಂಚಲಿಂಗ ದರ್ಶನಕ್ಕೆ ಬೇಕಾಗುವಷ್ಟು ಅನುದಾನ ಬಳಸಿಕೊಳ್ಳಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.
ಉಳಿದಂತೆ ಡಿ.10ರಿಂದ 19ರವರೆಗೆ ನಡೆಯಲಿರುವ ದರ್ಶನಕ್ಕೆ ಎಲ್ಲಾ ಸಿದ್ಧತೆ ಆಗುತ್ತಿದೆ. ಡಿ.14ರಂದು ವಿಶೇಷ ಮಹೋತ್ಸವ ಕಾರ್ಯಕ್ರಮವಿದೆ.
ಡಿ.13ರಂದು ರಾತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಸ್ತವ್ಯ ಮಾಡಿ, ಡಿ.14ರ ಮುಂಜಾನೆ ಪಂಚಲಿಂಗ ದರ್ಶನದ ವಿಶೇಷ ಪೂಜೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
1 ಸಾವಿರ ಜನಕ್ಕೆ ಸೀಮಿತ?
ಈ ಬಾರಿಯ ಪಂಚಲಿಂಗ ದರ್ಶನಕ್ಕೆ ಒಂದು ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ ಭಾಗ್ಯ ಸಿಗಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸಲಹೆ ನೀಡುವಂತೆ ಪರಿಣತರ ಸಮಿತಿಗೆ ವರದಿ ಕೇಳಲಾಗಿತ್ತು. ಆ ವರದಿಯಂತೆ ಪ್ರತಿ ದಿನ 1000 ಜನರಿಗೆ ಹಾಗೂ ಡಿ.14ರಂದು 1500 ಜನರಿಗೆ ಅವಕಾಶ ನೀಡುವಂತೆ ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ತಲಕಾಡಿನ ಜನರು ಹಾಗೂ ಆ ತಾಲ್ಲೂಕಿನ ಜನರಿಗೆ ಮಾತ್ರ ಅವಕಾಶ ನೀಡಿ, ಹೊರಗಿನವರಿಗೆ ಅವಕಾಶ ನೀಡದಂತೆ ಪರಿಣತರ ಸಮಿತಿ ಸಲಹೆ ಮಾಡಿದೆ ಎಂದರು.
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More
ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More
This website uses cookies.
Leave a Comment