Main News

ಅಫ್ಘಾನಿಸ್ತಾನದಿಂದ ಭಾರತಕ್ಕೆ ಆಮದು‌ – ರಫ್ತು ಸ್ಥಗಿತಗೊಳಿಸಿದ ತಾಲಿಬಾನ್ ಉಗ್ರರು

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ವಶ ಪಡಿಸಿಕೊಂಡ ನಂತರ ತಾಲಿಬಾನ್ ಭಾರತದೊಂದಿಗಿನ ಎಲ್ಲಾ ಆಮದು ಮತ್ತು ರಫ್ತುಗಳನ್ನು ನಿಲ್ಲಿಸಿದೆ.

ಪಾಕಿಸ್ತಾನದ ಸಾಗಾಣಿಕಾ ಮಾರ್ಗಗಳ ಮೂಲಕ ಸರಕು ಸಾಗಣೆಯನ್ನು ತಾಲಿಬಾನ್ ನಿಲ್ಲಿಸಿದೆ.

ಭಾರತವು ಸಕ್ಕರೆ, ಔಷಧಿಗಳು, ಉಡುಪು, ಚಹಾ, ಕಾಫಿ, ಮಸಾಲೆಗಳು ಮತ್ತು ಟ್ರಾನ್ಸ್ಮಿಷನ್ ಟವರ್ ಗಳನ್ನು ಅಫ್ಘಾನಿಸ್ತಾನಕ್ಕೆ ರಫ್ತು ಮಾಡುತ್ತದೆ. ಮುಖ್ಯವಾಗಿ ಡ್ರೈ ಫ್ರೂಟ್ಸ್ ಸೇರಿದಂತೆ ಕೆಲವು ವಸ್ತುಗಳನ್ನು ಭಾರತವು ಆಮದು ಮಾಡಿಕೊಳ್ಳುತ್ತಿದೆ. ಇದಲ್ಲದೆ ಅಫ್ಘಾನಿಸ್ತಾನದಿಂದ ಸಣ್ಣ ಪ್ರಮಾಣದ ಗಮ್ ಮತ್ತು ಈರುಳ್ಳಿಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತದೆ.

ಅಫ್ಘಾನಿಸ್ತಾನದಿಂದ ರಫ್ತು ಮತ್ತು ಆಮದು ನಿಲ್ಲಿಸಲಾಗಿದೆ ಅಂತಾ ಭಾರತೀಯ ರಫ್ತು ಸಂಸ್ಥೆಯ ಒಕ್ಕೂಟದ ಮಹಾನಿರ್ದೇಶಕ(ಎಫ್‌ಐಇಒ) ಡಾ.ಅಜಯ್ ಸಹಾಯ್ ಹೇಳಿದ್ದಾರೆ.

ನಾವು ಅಫ್ಘಾನಿಸ್ತಾನದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಲ್ಲಿಂದ ಆಮದುಗಳು ಪಾಕಿಸ್ತಾನದ ಸಾಗಣೆ ಮಾರ್ಗದ ಮೂಲಕ ಬರುತ್ತವೆ. ಇಲ್ಲಿಯವರೆಗೆ ತಾಲಿಬಾನ್ ಪಾಕಿಸ್ತಾನಕ್ಕೆ ಸರಕು ಸಾಗಣೆಯನ್ನು ನಿಲ್ಲಿಸಿದೆ. ಆದ್ದರಿಂದ ಆಮದು ನಿಂತಿದೆ’ ಎಂದು ಸಹಾಯ್ ತಿಳಿಸಿದ್ದಾರೆ.

ಭಾರತವು ಅಫ್ಘಾನಿಸ್ತಾನದ ಅತಿದೊಡ್ಡ ವ್ಯಾಪಾರ ಪಾಲುದಾರರಲ್ಲಿ ಒಂದಾಗಿದೆ. ಯುದ್ಧಪೀಡಿತ ರಾಷ್ಟ್ರದಲ್ಲಿ ಭಾರತವು ಗಮನಾರ್ಹ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ವಾಸ್ತವವಾಗಿ ನಾವು ಅಫ್ಘಾನಿಸ್ತಾನದ ಅತಿದೊಡ್ಡ ವ್ಯಾಪಾರ ಪಾಲುದಾರರಲ್ಲಿ ಒಬ್ಬರಾಗಿದ್ದೇವೆ. 2021ರಲ್ಲಿ ಅಫ್ಘಾನಿಸ್ತಾನಕ್ಕೆ ನಮ್ಮ ರಫ್ತುಗಳು ಸುಮಾರು 835 ಮಿಲಿಯನ್ ಅಮೆರಿಕನ್ ಡಾಲರ್ ನಷ್ಟಿದೆ. ನಾವು ಸುಮಾರು 510 ಮಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದ್ದೇವೆ’ ಎಂದು ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024