ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ಹೈವೆಯಲ್ಲಿ ಬೈಕ್​ಗಳಿಗೂ ಪ್ರವೇಶ ಕುರಿತು ಚರ್ಚೆ – ಸಿಂಹ

Team Newsnap
1 Min Read

ಬೆಂಗಳೂರು-ಮೈಸೂರು ನಡುವೆ ನಿರ್ಮಾಣವಾಗುತ್ತಿರುವ ಎಕ್ಸ್​ ಪ್ರೆಸ್​​ ರಸ್ತೆಯಲ್ಲಿ ಬೈಕ್​ಗಳ ಸಂಚಾರದ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದರು

ಇದನ್ನು ಓದಿ –ಶೇ 1ರಷ್ಟು ಕಮೀಷನ್ ಪಡೆದ ಆರೋಪ ಪಂಜಾಬ್ ಆರೋಗ್ಯ ಸಚಿವರನ್ನೇ ವಜಾಗೊಳಿಸಿದ ಸಿ ಎಂ

ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಸಿಂಹ ಈಗಿನ ದಶಪಥ ರಸ್ತೆ ಕಾಮಗಾರಿ ಭರದಿಂದ ಸಾಗಿದೆ. ಇದು ಪೂರ್ಣಗೊಂಡ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಕೇವಲ ಒಂದು ಗಂಟೆಯೊಳಗೆ ತಲುಪಬಹುದು ಎಂಧರು

ಈ ನಡುವೆ ಎಕ್ಸ್​ಪ್ರೆಸ್​ವೇ ಆಗಿರುವುದರಿಂದ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ದ್ವಿಚಕ್ರವಾಹನಗಳಿಗೆ ಹೈವೇ ಯಲ್ಲಿ ಪ್ರವೇಶ ನೀಡಬೇಕೆ ಅಥವಾ ಬೇಡವೇ ಎಂಬ ಚರ್ಚೆಯೂ ನಡೆಸಲಾಗಿದೆ ಎಂದು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯ 1 ಗಂಟೆಗೆ ಕಡಿತಗೊಳ್ಳಲಿದೆ.

ಈ ಮಧ್ಯೆ ಮೈಸೂರು ಬೆಂಗಳೂರು ಸರ್ವಿಸ್ ರಸ್ತೆಯಲ್ಲಿ ಬೈಕ್‌ಗಳಿಗೆ ಮುಕ್ತ ಅವಕಾಶ ಕೊಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆಮುಖ್ಯರಸ್ತೆಯಲ್ಲಿ ಪ್ರವೇಶ ನೀಡಬೇಕಾ ಬೇಡವಾ ಈ ಬಗ್ಗೆ ಚಿಂತನೆ ನಡೆದಿದೆ ಎಂದಿದ್ದಾರೆ.

ಎಕ್ಸ್‌ಪ್ರೆಸ್‌ ರಸ್ತೆಯಲ್ಲಿ ಬೇರೆ ವಾಹನಗಳಿಗೆ ಅಡ್ಡಿಯಾಗುವುದರಿಂದ ಈ ಈ ಬಗ್ಗೆ ಸಿಸಿ ಆಧಾರದ ಮೇಲೆ ಬೈಕ್‌ಗಳಿಗೆ ಪ್ರವೇಶಕ್ಕೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಅವಕಾಶ ನೀಡಿದರೆ ಬೈಕ್‌ಗಳಿಗೂ ಟೋಲ್ ವಿಧಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ.

Share This Article
Leave a comment