ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈಗೆ ಸಚಿವ ಟಿ.ಎಂ.ಅನ್ಬರಸನ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಮಿಳುನಾಡು ಬಿಜೆಪಿ ಘಟಕ ಆರೋಪ ಮಾಡಿದೆ.
ತಮಿಳುನಾಡಿನ ಬಿಜೆಪಿ ಉಪಾಧ್ಯಕ್ಷ ನಾರಾಯಣ್ ತಿರುಪತಿ ಗಂಭೀರ ಆರೋಪ ಹೊರಿಸಿ ಇನ್ಮುಂದೆ ನಮ್ಮ ಸರ್ಕಾರದ ವಿರುದ್ಧ ಮಾತನಾಡಿದರೆ ನಿಮ್ಮನ್ನ ಮುಗಿಸಿ ಹಾಕುತ್ತೇವೆ ಎಂದು ಡಿಎಂಕೆ ಸಚಿವ ಬೆದರಿಕೆ ಹಾಕಿದ್ದಾರೆ. ಮಾತ್ರವಲ್ಲ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಮೇಲೆ ಆಕ್ಷೇಪಾರ್ಹ ಪದಗಳನ್ನ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಎಂಕೆ ಸ್ಟಾಲೀನ್ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮತ್ತು ಹಿಂದೂ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ಈ ಹಿಂದೆ ತಮಿಳುನಾಡು ಬಿಜೆಪಿ ಆರೋಪ ಮಾಡಿತ್ತು. ಇದನ್ನು ಓದಿ – ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರ – ತಮಿಳುನಾಡಿನಿಂದ ಸುಪ್ರೀಂನಲ್ಲಿ ಮತ್ತೆ ತಕರಾರು
ಅಂದಿನಿಂದ ಡಿಎಂಕೆ ಮತ್ತು ಬಿಜೆಪಿ ನಡುವಿನ ವಾಕ್ಸಮರಗಳು ಜೋರಾಗಿ ನಡೆಯುತ್ತಿವೆ.
ರಾಜ್ಯಾಧಕ್ಷರಿಗೆ ಜೀವ ಬೆದರಿಕೆ ಹಾಕಿರುವ ಸಚಿವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ಉಚ್ಛಾಟಿಸಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ