Main News

ಟಾಟಾ ನೆಕ್ಸಾನ್‌ ಎಲೆಕ್ಟ್ರಿಕ್‌ ಕಾರು : ಬೆಂಕಿಗೆ ಆಹುತಿ

ಮುಂಬೈನ ವಸೈ ವೆಸ್ಟ್‌ನಲ್ಲಿ ನೆಕ್ಸಾನ್‌ ಇವಿ ಕಾರು ಬೆಂಕಿಗೆ ಆಹುತಿಯಾಗಿರೋ ಬಗ್ಗೆ ವರದಿಯಾಗಿದೆ. ಭಾರತದಲ್ಲಿ ಎಲೆಕ್ಟ್ರಿಕ್‌ ಕಾರೊಂದು ಹೊತ್ತಿ ಉರಿದಿರೋದು ಇದೇ ಮೊದಲು. ದುರ್ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿರೋ ಸಂಸ್ಥೆ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದೆ.

ಇದನ್ನು ಓದಿ ಮದುವೆ ಮೆರವಣಿಗೆ ವೇಳೆ ಖುಷಿಗೆ ಗುಂಡು ಹಾರಿಸಿದ ವರ : ಸ್ನೇಹಿತ ಸಾವು

ವಾಹನ ಮತ್ತದರ ಬಳಕೆದಾರರ ಸುರಕ್ಷತೆ ಕಾಪಾಡುವಲ್ಲಿ ನಾವು ಬದ್ಧರಾಗಿದ್ದೇವೆ ಎಂದಿರೋ ಸಂಸ್ಥೆ, ಸಂಪೂರ್ಣ ತನಿಖೆ ಬಳಿಕ ಘಟನೆಗೆ ಸಂಬಂಧಪಟ್ಟ ಮತ್ತಷ್ಟು ವಿವರ ನೀಡುವುದಾಗಿ ತಿಳಿಸಿದೆ.

ಮೂಲಗಳ ಪ್ರಕಾರ ನೆಕ್ಸಾನ್‌ ಎಲೆಕ್ಟ್ರಿಕ್‌ ಕಾರಿನ ಮಾಲೀಕ ತನ್ನ ಕಚೇರಿಯಲ್ಲಿ ಹಾಕಿದ್ದ ಸ್ಲೋ ಚಾರ್ಜರ್‌ ಮೂಲಕವೇ ಕಾರನ್ನು ಚಾರ್ಜ್‌ ಮಾಡಿದ್ದ. ಕೆಲಸ ಮುಗಿಸಿಕೊಂಡು ಸಂಜೆ ಕಚೇರಿಯಿಂದ ಹೊರಟಿದ್ದಾನೆ. ಸುಮಾರು 5 ಕಿಮೀ ದೂರ ಹೋಗುವಷ್ಟರಲ್ಲಿ ವಾರ್ನಿಂಗ್‌ ಬರಲು ಶುರುವಾಗಿದೆ. ಡ್ಯಾಶ್‌ ಬೋರ್ಡ್‌ ಮೂಲಕ ಬೆಂಕಿ ಕಿಡಿ ಕಾಣಿಸಿಕೊಂಡಿತ್ತು. ಕೂಡಲೇ ಅಲರ್ಟ್‌ ಆದ ಆತ ಕಾರಿನಿಂದ ಕೆಳಕ್ಕಿಳಿದಿದ್ದಾನೆ.

ಕ್ಷಣಮಾತ್ರದಲ್ಲಿ ಕಾರು ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ಆರಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನೆಕ್ಸಾನ್‌ ಎಲೆಕ್ಟ್ರಿಕ್‌ ಕಾರುಗಳು ಭಾರತದಲ್ಲಿವೆ. ಸುಮಾರು 30 ಸಾವಿರ ವಾಹನಗಳು ಮಾರಾಟವಾಗಿವೆ. ಆದರೆ ಇಂತಹ ದುರ್ಘಟನೆ ನಡೆದಿರುವುದು ಇದೇ ಮೊದಲು ಎಂದು ಕಂಪನಿ ಹೇಳಿಕೊಂಡಿದೆ.

ಟಾಟಾ ನೆಕ್ಸಾನ್ ಇವಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ಕಾರು. ಪ್ರತಿ ತಿಂಗಳು ಕನಿಷ್ಠ 2,500-3,000 ಕಾರುಗಳು ಮಾರಾಟವಾಗುತ್ತಿವೆ. ಕಂಪನಿಯು ಇಲ್ಲಿಯವರೆಗೆ 30,000 ನೆಕ್ಸಾನ್‌ ಇವಿ ಗಳನ್ನು ಮಾರಾಟ ಮಾಡಿದೆ.

ಈ ಹಿಂದೆಯೂ ಬ್ಯಾಟರಿ ಸ್ಫೋಟದಿಂದಾಗಿ ಹಲವಾರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿರೋ ಘಟನೆಗಳು ನಡೆದಿವೆ. ಓಲಾ ಎಲೆಕ್ಟ್ರಿಕ್, ಪ್ಯೂರ್ ಇವಿ, ಜಿತೇಂದ್ರ ಇವಿ ಟೆಕ್, ಅಥರ್ ಎನರ್ಜಿ ಮತ್ತು ಓಕಿನಾವಾ ಮುಂತಾದ ಇವಿ ತಯಾರಕರ ಬಗ್ಗೆ ಸರ್ಕಾರವೂ ತನಿಖೆ ಕೈಗೆತ್ತಿಕೊಂಡಿದೆ. ದ್ವಿಚಕ್ರ ವಾಹನಗಳ ಬೆನ್ನಲ್ಲೇ ಎಲೆಕ್ಟ್ರಿಕ್‌ ಕಾರು ಕೂಡ ಬೆಂಕಿಗೆ ಆಹುತಿಯಾಗಿರೋದು ಆತಂಕ ಮೂಡಿಸಿದೆ.

Team Newsnap
Leave a Comment

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024