ವಿದ್ಯಾರ್ಥಿಗಳ ಶುಲ್ಕ ದುರ್ಬಳಕೆ ವಿಚಾರಕ್ಕೆ ಪ್ರೌಢಶಾಲೆ ಶಿಕ್ಷಕರ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಿವಿಯೊಳಗಿನ ಪರದೆ ಹರಿಯುವಂತೆ ಸಹ ಶಿಕ್ಷಕನಿಗೆ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ನಡೆದಿದೆ.
ಹೊಸದುರ್ಗ ತಾಲೂಕು ಕಲ್ಪತರು ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಘಟನೆ ನಡೆದಿದೆ.ಇದನ್ನು ಓದಿ-ಇಂಡೋನೇಷ್ಯಾದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಕಾಲ್ತುಳಿತ: 127 ಸಾವು, 180 ಜನರಿಗೆ ಗಾಯ
ಮುಖ್ಯ ಶಿಕ್ಷಕ ಶಿವಾನಂದ ಗಣಿತ ಶಿಕ್ಷಕ ಸುರೇಶ್ಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಶಿವಾನಂದ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿ ದುರ್ಬಳಕೆ ಮಾಡಿಕೊಂಡಿದ್ದರು. ಈ ಬಗ್ಗೆ ಸುರೇಶ್ ಪ್ರಶ್ನಿಸಿದಾಗ ಇಬ್ಬರ ನಡುವೆ ಮಾರಾಮಾರಿ ನಡೆದಿದೆ.
ಆ ಬಳಿಕ ಮಾರಣಾಂತಿಕ ಹಲ್ಲೆಯಾದರೂ ಶಿವಾನಂದ ಜೊತೆ ರಾಜಿಯಾಗುವಂತೆ ಸುರೇಶ್ಗೆ ಒತ್ತಡ ಹಾಕಿರುವ ಪ್ರಸಂಗ ನಡೆದಿದೆ.
ಹೊಸದುರ್ಗ ಬಿಇಓ ಜಯ್ಯಪ್ಪ ನೇತೃತ್ವದಲ್ಲಿ ರಾಜಿ ಸಂಧಾನಕ್ಕೆ ಯತ್ನ ನಡೆದಿದೆ.
ಶಿವಾನಂದ ಜೊತೆ ರಾಜಿಯಾಗುವಂತೆ ಸುರೇಶ್ಗೆ ಒತ್ತಡ ಹಾಕುತ್ತಿರುವ ವೀಡಿಯೋ ವೈರಲ್ ಆಗಿದೆ ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯ ಶಿಕ್ಷಕರ ತಪ್ಪೊಪ್ಪಿಗೆ ವೀಡಿಯೋ ಹರಿದಾಡುತ್ತಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ