ಆಸ್ಟ್ರೇಲಿಯಾ ವಿರುದ್ಧ ಸುದೀರ್ಘ ಟೂರ್ನಿ ನವೆಂಬರ್ ಅಂತ್ಯದಲ್ಲಿ ಆರಂಭವಾಗಲಿದ್ದು, ಟೀಂ ಇಂಡಿಯಾ ಆಟಗಾರರು ಟೂರ್ನಿಯಲ್ಲಿ ರೆಟ್ರೋ ಥೀಮ್ ಜರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ಆಸೀಸ್ ವಿರುದ್ಧ ಟೂರ್ನಿಗಾಗಿ ಈಗಾಗಲೇ ದುಬೈನಿಂದ ಹೊರಟಿರುವ ಟೀಂ ಇಂಡಿಯಾ ಆಟಗಾರರು ಶುಕ್ರವಾರದಿಂದಲೇ ನೆಟ್ ತರಬೇತಿ ಆರಂಭಿಸಲಿದ್ದಾರೆ. ಆಸೀಸ್ ಪ್ರವಾಸ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಹೊಸ ಜರ್ಸಿಯೊಂದಿಗೆ ಕಣಕ್ಕಿಳಿಯಲಿದ್ದು, ಜರ್ಸಿಯ ಫಸ್ಟ್ ಲುಕ್ ಅನ್ನು ಬಿಸಿಸಿಐ ಬಿಡುಗಡೆಗೊಳಸಿದೆ. ಹೊಸ ಜರ್ಸಿ ರೆಟ್ರೋ ಥೀಮ್ನಲ್ಲಿ ಸಿದ್ಧಪಡಿಸಲಾಗಿದೆ.
ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರರು ಧರಿಸಿದ್ದ ಜರ್ಸಿಯ ಲುಕ್ಗೆ ಮೆರುಗು ನೀಡಿ 70 ದಶಕದ ಸ್ಫೂರ್ತಿಯೊಂದಿಗೆ ಹೊಸ ಜರ್ಸಿಯನ್ನು ಸಿದ್ಧಪಡಿಸಲಾಗಿದೆ. ನೀಲಿ ಬಣ್ಣದಲ್ಲಿದ್ದ ಜರ್ಸಿ ಕಡು ನೀಲಿಬಣಕ್ಕೆ ಬದಲಾಗಿದ್ದು, ಭುಜದ ಭಾಗದಲ್ಲಿ ಮೊದಲು ಬಿಳಿ, ಕೆಂಪು, ಹಸಿರು, ನೀಲಿ ಬಣ್ಣಗಳ ಪಟ್ಟಿಗಳನ್ನು ಕಾಣಬಹುದಾಗಿದೆ. ಜರ್ಸಿಯ ಮೇಲೆ ಎಂಪಿಎಲ್ ಸ್ಪೋರ್ಟ್ಸ್ ಹೆಸರನ್ನು ಮುದ್ರಿಸಲಾಗಿದೆ. ಟೀಂ ಇಂಡಿಯಾ ಆಟಗಾರರಿಗೆ ಹೊಸ ಪ್ರಯೋಜಕತ್ವ ನೀಡುತ್ತಿರುವ ಎಂಪಿಎಲ್ ಸ್ಪೋರ್ಟ್ಸ್ ಹೊಸ ಕಿಟ್ಗಳನ್ನು ನೀಡುತ್ತಿದೆ.
ಇದೇ ಟೂರ್ನಿಯಲ್ಲಿ ಆಸೀಸ್ ತಂಡ ಕೂಡ ಹೊಸ ಜರ್ಸಿಯೊಂದಿಗೆ ಕಣಕ್ಕಿಳಿಯುತ್ತಿದೆ. ಆಸೀಸ್ನ ಸ್ಥಳೀಯ ಅಂಶಗಳನ್ನು ಸಾರಿ ಹೇಳುವಂತೆ ಹೊಸ ಜರ್ಸಿಯನ್ನು ವಿನ್ಯಾಸ ಮಾಡಲಾಗಿದೆ. ಅಲ್ಲದೇ 1868ರ ಕ್ರಿಕೆಟ್ ತಂಡದ ಕಥೆಯನ್ನು ಈ ಸಮವಸ್ತ್ರ ಹೇಳುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ. ಟಿ20 ಸರಣಿಯಲ್ಲಿ ಆಸೀಸ್ ಪಡೆ ಹೊಸ ಜರ್ಸಿಯನ್ನು ಧರಿಸಲಿದೆ.
ಐಪಿಎಲ್ ಟೂರ್ನಿಯಂತೆ ಸಂಪೂರ್ಣ ಬಯೋಸೆಕ್ಯೂರ್ ವಾತಾವರಣದಲ್ಲೇ ಟೂರ್ನಿ ನಡೆಯಲಿದೆ. ನ.27 ರಿಂದ ಮೂರು ಪಂದ್ಯಗಳ ಟಿ20 ಆರಂಭವಾಗಲಿದೆ. ಆ ಬಳಿಕ ಏಕದಿನ ಹಾಗೂ ಟೆಸ್ಟ್ ಪಂದ್ಯಗಳು ನಡೆಯಲಿದೆ. ಟೂರ್ನಿಯ ವಿಶೇಷವಾಗಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳ ನಡುವೆ ಡಿಸೆಂಬರ್ 17 ರಂದು ಡೇ ಅಂಡ್ ನೈಟ್ ಟೆಸ್ಟ್ ಪಂದ್ಯ ನಡೆಯಲಿದೆ. ಇತ್ತಂಡಗಳ ನಡುವೆ ನಡೆಯುತ್ತಿರುವ ಮೊದಲ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯ ಇದಾಗಿದೆ.
ಟಿ20 ತಂಡ: ಕೊಹ್ಲಿ, ಧವನ್, ಮಯಾಂಕ್, ಕೆಎಲ್ ರಾಹುಲ್, ಶ್ರೇಯಾಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ಜಡೇಜಾ, ವಾಷಿಂಗ್ಟನ್ ಸುಂದರ್, ಚಹಲ್, ಬುಮ್ರಾ, ಶಮಿ, ಶೈನಿ, ದೀಪಕ್ ಚಹರ್, ನಟರಾಜನ್.
ಏಕದಿನ ತಂಡ: ವಿರಾಟ್ ಕೊಹ್ಲಿ, ಧವನ್, ಶುಭ್ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಾಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಂಕ್, ಜಡೇಜಾ, ಚಹಲ್, ಕುಲ್ದೀಪ್ ಯಾದವ್, ಬುಮ್ರಾ, ಶಮಿ, ಶೈನಿ, ಶಾರ್ದೂಲ್ ಠಾಕೂರ್, ಸಂಜು ಸ್ಯಾಮ್ಸನ್.
ಟೆಸ್ಟ್ ತಂಡ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಯಾಂಕ್, ಪೃಥ್ವಿ ಶಾ, ಕೆಎಲ್ ರಾಹುಲ್, ಚೇತೇಸ್ವರ ಪೂಜಾರಾ, ರಹಾನೆ, ಹನುಮ ವಿಹಾರಿ, ಶುಭ್ಮನ್ ಗೀಲ್, ವೃದ್ಧಿಮಾನ್ ಸಹಾ, ರಿಷಬ್ ಪಂತ್, ಬುಮ್ರಾ, ಶಮಿ, ಉಮೇಶ್ ಯಾದವ್, ಶೈನಿ, ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment