Karnataka

ಗುರು ಸೇವೆ ಸ್ಮರಿಸಿದ ಚಿಕ್ಕಮಂಡ್ಯ ಶಾಲೆಯ ಹಳೆಯ ವಿದ್ಯಾರ್ಥಿಗಳ ತಂಡ

ಮಂಡ್ಯ: 39 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಸ್.ಲೋಕೇಶ್ ಅವರಿಗೆ ಚಿಕ್ಕಮಂಡ್ಯ ಸರ್ಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು.

ಶಿಕ್ಷಕ ಲೋಕೇಶ್ ಅವರ ಕುವೆಂಪುನಗರದಲ್ಲಿನ ನಿವಾಸಕ್ಕೆ ತೆರಳಿದ ಚಿಕ್ಕಮಂಡ್ಯ ಸರಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿಯ ಮೊದಲ ತಂಡದ ವಿದ್ಯಾರ್ಥಿಗಳು ನೆಚ್ಚಿನ ಶಿಕ್ಷಕನಿಗೆ ಪ್ರೀತಿ, ಗೌರವದಿಂದ ಸನ್ಮಾನಿಸಿ ಅಭಿನಂದಿಸಿದರು. 27 ವರ್ಷಗಳ ಹಿಂದಿನ ಶಾಲೆಯ ದಿನಗಳನ್ನು ಮೆಲುಕು ಹಾಕುತ್ತಾ ನೆನಪಿನಂಗಳಕ್ಕೆ ಜಾರಿದರು.

ಶಾಲೆಗಳಲ್ಲಿ ನಡೆಯುತ್ತಿದ್ದ ಪಾಠ-ಪ್ರವಚನ, ಮೂಲಸೌಕರ್ಯಗಳ ಕೊರತೆಯಿಂದ ಎದುರಿಸಿದ ಸವಾಲುಗಳು, ವಿದ್ಯಾರ್ಥಿಗಳ ಹಿಂದಿನ ನಡವಳಿಕೆಗಳು, ಪರೀಕ್ಷಾ ದಿನಗಳು, ಕಲಿಕಾ ಸಾಮರ್ಥ್ಯ, ಶಾಲಾ ದಿನಗಳ ತುಂಟತನ… ಹೀಗೆ ಹತ್ತಾರು ಸಂಗತಿಗಳೊಂದಿಗೆ ನೆನಪಿನ ಪುಟಗಳನ್ನು ತಿರುವು ಹಾಕಿದರು.

ವಿಜ್ಞಾನ, ಗಣಿತದ ವಿಷಯಗಳು, ಪವಾಡ ರಹಸ್ಯ ಬಯಲು, ವಿಜ್ಞಾನ ಮಾದರಿಗಳ ಪ್ರದರ್ಶನದ ಬಗ್ಗೆ ತರ್ಕಬದ್ಧ ಚರ್ಚೆ ನಡೆಸಿದರು.
ಈ ವೇಳೆ ನಿವೃತ್ತ ಶಿಕ್ಷಕ ಎಸ್.ಲೋಕೇಶ್ ಅವರು ಮಾತನಾಡಿ, ಶಾಲಾ ದಿನಗಳಲ್ಲಿ ನಿಮಗೆ ಸಾಧ್ಯವಾದಷ್ಟು ಕಲಿಸುವ ಪ್ರಯತ್ನವನ್ನು ನಾವೆಲ್ಲಾ ಶಿಕ್ಷಕರು ಮಾಡಿದ್ದೇವೆ. ಈಗ ನಿಮ್ಮಗಳ ಸರದಿ. ನಿಮ್ಮ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ತಿಳಿಸಿ. ಮಕ್ಕಳನ್ನು ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸಿ. ಒಳ್ಳೆಯ ಶಿಕ್ಷಣ ಕೊಡಿ. ಸಮಯಕ್ಕೆ ಆದ್ಯತೆ ಕೊಡಿ. ಸಮಯಪಾಲನೆ ಮಾಡಿ. ನಿಮ್ಮ ಮಕ್ಕಳಿಗೂ ಅದನ್ನು ಕಲಿಸಿ ಎಂದು ಸಲಹೆ ನೀಡಿದರು.

ಶಿಕ್ಷಕ ಲೋಕೇಶ್ ಅವರ ಬಗ್ಗೆ ಹಿರಿಯ ವಿದ್ಯಾರ್ಥಿಗಳು ಅಭಿಮಾನದಿಂದ ಮಾತನಾಡಿದರು. ಅಂತಿಮವಾಗಿ ನೆನಪಿನ ಕಾಣಿಸಿ ನೀಡಿ, ಹಾರ-ಶಾಲು ಹೊದಿಸಿ ಗೌರವ ಸಮರ್ಪಣೆ ಮಾಡಿ ಗುರುವಂದನೆ ಸಲ್ಲಿಸಿದರು. ಕೇಕ್ ಕತ್ತರಿಸಿ ಹಂಚಿ ತಿನ್ನುವ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳಾದ ಕೇಶವ, ಸಿ.ಎಸ್.ದೇವರಾಜು, ಸಿ.ಡಿ.ರಾಜೇಶ್, ನವೀನ್, ಸತೀಶ್, ಸಿ.ಎಚ್.ಶಿವಕುಮಾರ್, ಸಿ.ಎಸ್.ಉಮೇಶ್, ಸಿ.ಕೆ.ಜ್ಯೋತಿ, ಎಚ್.ಎನ್.ಲತಾಮಣಿ, ಸಿ.ಕೆ.ನಾಗಮಣಿ, ರತ್ನಮ್ಮ, ತಾಯಮ್ಮ ಪ್ರತಿಭಾ, ಸಿ.ಪಿ.ಶಿಲ್ಪ, ಸುನೀತಾ ಇತರರು ಭಾಗವಹಿಸಿದ್ದರು.ಬೆಂಗಳೂರು ಮೈಸೂರು ದಶಪಥ ಹೆದ್ದಾರಿ 2ನೇ ಟೋಲ್ ಜುಲೈ 1 ರಿಂದ ಆರಂಭ

ನನ್ನ ಮನೆಯ ಬಡತನ ನನಗೆ ಸಾಕಷ್ಟು ಕಲಿಸಿತು, ಸೇವಾ ಮನೋಭಾವ ಹೆಚ್ಚಿಸಿತು. ಬದುಕು ಎಲ್ಲಕ್ಕಿಂತ ಮುಖ್ಯ ಮತ್ತು ದೊಡ್ಡದು. ಅದನ್ನು ನೀವು ಅನುಭವಿಸಿ. ನಿಮ್ಮ ಜೀವನ ಪ್ರತಿ ಹಂತದಲ್ಲೂ ನಾನು ನಿಮ್ಮೊಂದಿಗಿರುತ್ತೇನೆ. ನನ್ನ ಪುಣ್ಯ, ನನಗೆ ನಿಮ್ಮ ಪ್ರೀತಿ ಸಿಕ್ಕಿದೆ. ಇದು ಎಲ್ಲರಿಗೂ ಸಿಗಲ್ಲ. ನಿಮ್ಮ ಪ್ರೀತಿ ಹೀಗೆಯೇ ಇರಲಿ. ಎಲ್ಲರಿಗೂ ಬದುಕಿನಲ್ಲಿ ಅವಕಾಶ ಸಿಗಬೇಕು, ಸಿಗುತ್ತವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಿ.
ಎಸ್.ಲೋಕೇಶ್, ನಿವೃತ್ತ ಶಿಕ್ಷಕರು, ಮಂಡ್ಯ

Team Newsnap
Leave a Comment
Share
Published by
Team Newsnap

Recent Posts

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024