ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿ ಮಹಿಳೆ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಸ್ವಾರ್ತಿ ಕುಸುಮಾ (32)ಮೃತಳಾಗಿದ್ದಾಳೆ. ಈಕೆ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದಳು. ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ತಮ್ಮ ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಕೊಂಡು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ವಾತಿ ಕುಸುಮಾ, ಪತಿ ಸಾಯಿಕುಮಾರ್ ಇಬ್ಬರೂ ಕೊರೊನಾ ಸಮಯದಲ್ಲಿ ಸಾಫ್ಟ್ ವೇರ್ ಉದ್ಯೋಗ ಕಳೆದುಕೊಂಡಿದ್ದರು. ಕೆಲಸ ಕಳೆದುಕೊಂಡ ನಂತರ ಸಾಯಿಕುಮಾರ್ ಕಾಲ್ ಸೆಂಟರ್ನಲ್ಲಿ ಕಡಿಮೆ ಸಂಬಳಕ್ಕೆ ಸೇರಿಕೊಂಡಿದ್ದರು. ಸ್ವಾತಿ ಅವರು ಮನೆಯಲ್ಲೇ ಇದ್ದರು.
ಇದರಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಈ ಕೃತ್ಯ ಎಸಗಿದ್ದಾರೆ.