ನಂಜನಗೂಡಿನ ಹುಚ್ಚಗಣಿ ದೇವಸ್ಥಾನ ಧ್ವಂಸಗೊಳಿಸಿದ ತಹಶೀಲ್ದಾರ್​ ಎತ್ತಂಗಡಿ

Team Newsnap
0 Min Read

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ದ್ವಂಸ ಮಾಡಿಸಿದ ತಹಶೀಲ್ದಾರ್ ಮೋಹನ ಕುಮಾರಿಯನ್ನು ಎತ್ತಂಗಡಿ ಮಾಡಲಾಗಿದೆ.

ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿಯನ್ನು ವರ್ಗಾಣೆಗೊಳಿಸಿ ಇಂದು ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಚ್ಚಗಣಿ ದೇವಾಲಯ ತೆರವು ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು,

ರಾಜ್ಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶದ ಕೂಗು ಕೇಳಿಬಂದಿತ್ತು, ಇದೀಗ ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಿ ರಾಜ್ಯ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

Share This Article
Leave a comment