ತೆಲಂಗಾಣದಲ್ಲಿ ಮಂಡ್ಯದ ಕುಟುಂಬ ಸಂಕಷ್ಟದಲ್ಲಿ ಇರುವುದನ್ನು ಅರಿತ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವಿಟರ್ ಮೂಲಕ ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಂತೆ ಕೆಸಿಆರ್ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ.
ಮಂಡ್ಯ ಮೂಲದ ಶಶಿಕಲಾ ಮಂಜುನಾಥ್ ಕುಟುಂಬ ಸಂಕಷ್ಟದಲ್ಲಿತ್ತು. ಅವರ ಪತಿ ಮೆಡಿಕೋವರ್ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. ಪತಿಯ ಚಿಕಿತ್ಸೆಗಾಗಿ ಶಶಿಕಲಾ ಸಾಕಷ್ಟು ಹಣ ಖರ್ಚು ಮಾಡಿದ್ದರು.
ಅಂತಿಮವಾಗಿ ಆಸ್ಪತ್ರೆಯ 7.5 ಲಕ್ಷ ರೂ. ಬಿಲ್ ಆಗಿತ್ತು. , ಇನ್ನು 2 ಲಕ್ಷ ರು ಮೊತ್ತವನ್ನು ಅವರು ಇನ್ನೂ ಪಾವತಿಸಬೇಕಿತ್ತು. ಆದರೆ ಹಣ ಪಾವತಿಸುವವರೆಗೂ ಮೃತದೇಹ ಬಿಟ್ಟುಕೊಡುವುದಿಲ್ಲ ಎಂದು ಆಸ್ಪತ್ರೆ ಹಠ ಹಿಡಿದಿತ್ತು. ಆಗ ಡಿಕೆಶಿ ಶಶಿಕಲಾ ಅವರ ಕುಟುಂಬದ ಸಹಾಯಕ್ಕೆ ಧಾವಿಸುವಂತೆ ಮುಖ್ಯ ಮಂತ್ರಿ ಕೆಸಿ ಆರ್ ಅವರಿಗೆ ಮನವಿ ಮಾಡಿದ್ದರು.
ಪ್ರತಿಕ್ರಿಯೆ ನೀಡಿದ ಟಿಆರ್ಎಸ್ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಸಚಿವ ಕಲ್ವಕುಂಟ್ಲ ತಾರಕ ರಾಮರಾವ್ (ಕೆಟಿಆರ್), ಶಿವಕುಮಾರ್ ಅವರೇ, ನಾವು ಆ ಕುಟುಂಬದ ಬಗ್ಗೆ ಕಾಳಜಿ ವಹಿಸುತ್ತೇವೆ. ದಯವಿಟ್ಟು ಅವರ ಸಂಪರ್ಕದ ವಿವರ ನೀಡಿ. ನಮ್ಮ ಕಚೇರಿ ಅಧಿಕಾರಿಗಳು ಕೂಡಲೇ ಆಸ್ಪತ್ರೆ ಮೂಲವನ್ನು ಸಂಪರ್ಕಿಸಿ ಮಾಹಿತಿ ಪಡೆಯಲಿದ್ದಾರೆ ಎಂದು ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಯಿಂದ ಮೃತದೇಹವನ್ನು ಬಿಡುಗಡೆ ಮಾಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ