ತೆಲಂಗಾಣದಲ್ಲಿ ಮಂಡ್ಯದ ಕುಟುಂಬ ಸಂಕಷ್ಟದಲ್ಲಿ ಇರುವುದನ್ನು ಅರಿತ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವಿಟರ್ ಮೂಲಕ ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಂತೆ ಕೆಸಿಆರ್ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ.
ಮಂಡ್ಯ ಮೂಲದ ಶಶಿಕಲಾ ಮಂಜುನಾಥ್ ಕುಟುಂಬ ಸಂಕಷ್ಟದಲ್ಲಿತ್ತು. ಅವರ ಪತಿ ಮೆಡಿಕೋವರ್ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. ಪತಿಯ ಚಿಕಿತ್ಸೆಗಾಗಿ ಶಶಿಕಲಾ ಸಾಕಷ್ಟು ಹಣ ಖರ್ಚು ಮಾಡಿದ್ದರು.
ಅಂತಿಮವಾಗಿ ಆಸ್ಪತ್ರೆಯ 7.5 ಲಕ್ಷ ರೂ. ಬಿಲ್ ಆಗಿತ್ತು. , ಇನ್ನು 2 ಲಕ್ಷ ರು ಮೊತ್ತವನ್ನು ಅವರು ಇನ್ನೂ ಪಾವತಿಸಬೇಕಿತ್ತು. ಆದರೆ ಹಣ ಪಾವತಿಸುವವರೆಗೂ ಮೃತದೇಹ ಬಿಟ್ಟುಕೊಡುವುದಿಲ್ಲ ಎಂದು ಆಸ್ಪತ್ರೆ ಹಠ ಹಿಡಿದಿತ್ತು. ಆಗ ಡಿಕೆಶಿ ಶಶಿಕಲಾ ಅವರ ಕುಟುಂಬದ ಸಹಾಯಕ್ಕೆ ಧಾವಿಸುವಂತೆ ಮುಖ್ಯ ಮಂತ್ರಿ ಕೆಸಿ ಆರ್ ಅವರಿಗೆ ಮನವಿ ಮಾಡಿದ್ದರು.
ಪ್ರತಿಕ್ರಿಯೆ ನೀಡಿದ ಟಿಆರ್ಎಸ್ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಸಚಿವ ಕಲ್ವಕುಂಟ್ಲ ತಾರಕ ರಾಮರಾವ್ (ಕೆಟಿಆರ್), ಶಿವಕುಮಾರ್ ಅವರೇ, ನಾವು ಆ ಕುಟುಂಬದ ಬಗ್ಗೆ ಕಾಳಜಿ ವಹಿಸುತ್ತೇವೆ. ದಯವಿಟ್ಟು ಅವರ ಸಂಪರ್ಕದ ವಿವರ ನೀಡಿ. ನಮ್ಮ ಕಚೇರಿ ಅಧಿಕಾರಿಗಳು ಕೂಡಲೇ ಆಸ್ಪತ್ರೆ ಮೂಲವನ್ನು ಸಂಪರ್ಕಿಸಿ ಮಾಹಿತಿ ಪಡೆಯಲಿದ್ದಾರೆ ಎಂದು ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಯಿಂದ ಮೃತದೇಹವನ್ನು ಬಿಡುಗಡೆ ಮಾಡಿಸಿದ್ದಾರೆ.
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
This website uses cookies.
Leave a Comment