ತೆಲಗು ಕಿರುತೆರೆ ನಟಿ ಶ್ರಾವಣಿ ಆತ್ಮ ಹತ್ಯೆ

Team Newsnap
1 Min Read

ಹೈದರಾಬಾದ್:
ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದ ಕಿರುತೆರೆಯ ನಟಿ ಶ್ರಾವಣಿ ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧುರಾ ನಗರದಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಟಿ ಶವ ಪತ್ತೆಯಾಗಿದೆ.

ಕಳೆದ 7-8 ವರ್ಷಗಳಿಂದ ಸೀರಿಯಲ್ ಗಳಲ್ಲಿ.ನಟಿಸುತ್ತಿದ್ದ ಈಕೆ ಆತ್ಮಹತ್ಯೆ ಮಾಡಿಕೊಳ್ಳಲು ಟಿಕ್ ಟಾಕ್ ಸ್ನೇಹಿತ ದೇವರಾಜ್ ರೆಡ್ಡಿಯೆ ಕಾರಣವೆಂದು ಶ್ರಾವಣಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಸಂಬಂಧ ಪೋಲಿಸ್ ಠಾಣೆಗೆ ದೂರು ನೀಡಿ ದ್ದಾರೆ, ಪೋಲಿಸರು ತನಿಖೆ ಆರಂಭಿಸಿದ್ದಾರೆ.

ಈ ಮಧ್ಯೆ ಟಿಕ್ ಟಾಕ್ ನಲ್ಲಿ ಪರಿಚಯವಾದ ದೇವರಾಜ್ ಪ್ರೀತಿಸುವ ನಾಟಕವಾಡಿ ಪರಸ್ಪರ ಒಟ್ಟಿಗೆ ಇರುವ ಫೋಟೋಗಳನ್ನು ಸೋ ಷಿಯಲ್ ಮೀಡಿಯಾಗೆ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದ.
ಈ ಬಗ್ಗೆ ನಟಿಯು ಪೋಲಿಸ್ ಠಾಣೆಗೆ ದೂರು ಕೊಟ್ಟಿದ್ದರು. . ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮನಸು ಮಮತ,ಮೌನರಾಗಂ ಇನ್ನಿತರ ಸೀರಿಯಲ್ ಗಳಲ್ಲಿ ಅಭಿನಯಿಸಿದ್ದ ನಟಿ ಶ್ರಾವಣಿ ಹೆಚ್ಚು ಜನಪ್ರಿಯತೆ ಗಳಿಸಿದ್ದರು.

Share This Article
Leave a comment