ಬೆಂಗಳೂರು: ಬಿಸಿಲಿನ ತೀವ್ರತೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ಮತ್ತೊಂದು ಮುನ್ಸೂಚನೆ ನೀಡಿದ್ದು, ಈ ವಾರ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಲ್ಲಿಯೇ ಕೆಲವು ಜಿಲ್ಲೆಗಳಲ್ಲಿ 30-35 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದ್ದು, ಜನರು ಬಿಸಿಲಿನ ಬೇಗೆಯಿಂದ ಪರದಾಡುತ್ತಿದ್ದಾರೆ.
ಬಿಸಿಲಿನ ಝಳ ಹೆಚ್ಚಳವಾಗುವ ಜಿಲ್ಲೆಗಳು:
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಕೊಪ್ಪಳ, ಯಾದಗಿರಿ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಹವಾಮಾನ ಬದಲಾವಣೆಯಾಗಲಿದ್ದು, ತಾಪಮಾನ ಏರಿಕೆಯಾಗಲಿದೆ.
ಬಿಸಿಲಿನ ತೀವ್ರತೆಯಿಂದ ರಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮಗಳು:
- ಮಧ್ಯಾಹ್ನ 12:00 ರಿಂದ 3:00 ಗಂಟೆಯವರೆಗೆ ಬಿಸಿಲಿಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು.
- ಪ್ರಯಾಣಿಸುವಾಗ ನೀರಿನ ಬಾಟಲಿ ಜೊತೆಗೆ ಇಡುವುದು.
- ನಿರ್ಜಲೀಕರಣ ತಪ್ಪಿಸಲು ಸಾಕಷ್ಟು ನೀರು ಕುಡಿಯುವುದು.
- ಹಗುರವಾದ, ತೆಳುವಾದ, ಹತ್ತಿ ಬಟ್ಟೆ ಧರಿಸುವುದು.
- ಬಿಸಿಲಿನ ಸಂಧರ್ಭದಲ್ಲಿ ಕನ್ನಡಕಗಳು, ಛತ್ರಿ, ಟೋಪಿ, ಬೂಟು ಅಥವಾ ಚಪ್ಪಲಿ ಬಳಸುವುದು.
- ಬಹಳಷ್ಟು ಬಿಸಿ ಆಹಾರ ಸೇವನೆ ತಪ್ಪಿಸುವುದು.
- ಬಿಸಿ ಹವಾಮಾನದಲ್ಲಿ ಶ್ರಮದಾಯಕ ಚಟುವಟಿಕೆಗಳನ್ನು ಸಾಧ್ಯವಾದಷ್ಟು ನಿರಾಕರಿಸುವುದು.
- ತಣ್ಣೀರಿನ ಸ್ನಾನ ಮಾಡುವ ಮೂಲಕ ಶರೀರವನ್ನು ತಂಪಾಗಿರಿಸುವುದು.
- ಮಜ್ಜಿಗೆ, ನಿಂಬೆ ನೀರು, ORS, ಎಲೆಕ್ಟ್ರೋಲೈಟ್ ಪಾನೀಯಗಳನ್ನು ಸೇವಿಸುವುದು.
- ಅಲ್ಕೋಹಾಲ್, ಕಾಫಿ, ಚಹಾ ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ತಪ್ಪಿಸುವುದು.
- ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಸಾಕಷ್ಟು ನೀರು ಒದಗಿಸುವುದು.
- ಮನೆ ಮತ್ತು ಕೊಠಡಿಗಳನ್ನು ತಂಪಾಗಿಡಲು ಪರದೆ, ಶಟರ್ ಅಥವಾ ಸನ್ಶೇಡ್ ಬಳಸುವುದು.
ಇದನ್ನು ಓದಿ –ಮೆಟ್ರೋ ದರ ಏರಿಕೆ: ಪ್ರಯಾಣಿಕರ ಸಂಖ್ಯೆ ಕುಸಿತ, ಬಿಎಂಟಿಸಿ ಪ್ರಯಾಣಿಕರು ಹೆಚ್ಚಳ
ತೀವ್ರ ಬಿಸಿಲಿನ ನಡುವೆಯೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದು ಅತ್ಯಗತ್ಯ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು