ಬೆಂಗಳೂರಿನ ವ್ಯಾಪ್ತಿಯಲ್ಲಿರುವ ಮುಜರಾಯಿ ದೇವಸ್ಥಾನಗಳಿಗೆ ಸೇರಿದ 25 ಲಕ್ಷ ರುಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಧಾನ ಸಭಾ ಪೋಲೀಸರು ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರನ್ನು ಶುಕ್ರವಾರ ಬಂಧಿಸಿದ್ದಾರೆ
ವೆಂಕಟರಮಣ ಗುರು ಪ್ರಸಾದ್ ಎಂಬ ಅಧಿಕಾರಿಯೇ ಬಂಧಿತರು.
ಕಳೆದ ವರ್ಷದ ಕರಗ ಉತ್ಸವ ವೇಳೆ ಗುರು ಪ್ರಸಾದ್ ನಡೆಸಿರುವ ಅಕ್ರಮ ಈ ಬಾರಿ ಆಡಿಟ್ ಪರಿಶೀಲನೆ ವೇಳೆ ಬಯಲಿಗೆ ಬಂದ ನಂತರ ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರ್ ಅರವಿಂದ್ ಬಾಬು ಪೋಲೀಸರಿಗೆ ದೂರು ನೀಡಿದ್ದರು
ಆರೋಪಿ ವೆಂಕಟರಮಣ ಬೆಂಗಳೂರು ನಗರ ವ್ಯಾಪ್ತಿಯ ದೇವಸ್ಥಾನಗಳಿಗೆ ಸೇರಿ 25 ಲಕ್ಷಕ್ಕೂ ಹೆಚ್ಚು ಹಣವನ್ನು ಡ್ರಾ ಮಾಡಿಕೊಂಡು ಸ್ವಂತ ಖಾತೆ ವರ್ಗಾವಣೆ ಮಾಡಿಕೊಂಡ ತಪ್ಪು ಲೆಕ್ಕ ನೀಡಿದ್ದರು ಎಂದು ಪೋಲಿಸರು ತಿಳಿಸಿದ್ದಾರೆ
ಲೆಕ್ಕ ಪರಿಶೋಧನೆ ಪತ್ತೆಯಾದ ವಂಚನೆಯ ಬಗ್ಗೆ ವಿವರಣೆ ಕೇಳಲಾಗಿತ್ತು. ಧರ್ಮ ರಾಯನ ದೇವಸ್ಥಾನಕ್ಕೆ ಸೇರಿದ 15 . 97 ಲಕ್ಷ ರುಗಳನ್ನು ಕರಗದ ಖರ್ಚು ಎಂದು ತೋರಿಸಿದ್ದಾರೆ ಅಲ್ದೇ 10 ಗ್ರಾಂ ಚಿನ್ನದ ಗಟ್ಟಿ ಹಾಗೂ ಆಭರಣಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!