ವಿಶ್ವ ಹಿಂದೂ ಪರಿಷತ್ ಅಷ್ಟಮಂಗಳ ಪ್ರಶ್ನೆಯ ಬದಲಿಗೆ ಇಂದು ತಾಂಬೂಲ ಪ್ರಶ್ನೆ ಇಡಲು ನಿರ್ಧರಿಸಿದೆ, ಮಂಗಳೂರಿನ ಮಸೀದಿ ರಹಸ್ಯ ಪತ್ತೆಗೆ ಮುಂದಾಗಿದೆ. ಮಳಸಿ ಮಸೀದಿಯ ಅನತಿ ದೂರದಲ್ಲಿರುವ ರಾಮಾಂಜನೇಯ ಭಜನಾ ಮಂದಿರದಲ್ಲಿ ಇಂದು ತಾಂಬೂಲ ಪ್ರಶ್ನೆ ನಡೆಯಲಿದೆ.
ಇಂದು ಬೆಳಗ್ಗೆ 8 ಗಂಟೆಯಿಂದಲೇ ಕೇರಳದ ಜ್ಯೋತಿಷಿ ಪುದುವಾಳ್ ತಾಂಬೂಲ ಪ್ರಶ್ನೆ ಇಡಲಿದ್ದಾರೆ. ವೀಳ್ಯದೆಲೆಗಳ ಲೆಕ್ಕಾಚಾರದ ಆಧಾರದಲ್ಲಿ ಗ್ರಹಗತಿಗಳ ಚಲನೆ ಮೇಲೆ, ದೈವಿ ಶಕ್ತಿ ಪತ್ತೆ ಕಾರ್ಯ ನಡೆಯುತ್ತದೆ. ತಾಂಬೂಲ ಪ್ರಶ್ನೆ ಕಾರ್ಯದಲ್ಲಿ ವಿಶ್ವಹಿಂದೂ ಪರಿಷತ್ ಸಂಘಟನೆ ಸದಸ್ಯರು, ಸ್ಥಳೀಯರು, ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭಾಗಿಯಾಗಲಿದ್ದಾರೆ.
ತಾಂಬೂಲ ಪ್ರಶ್ನೆ ಇರುವುದರಿಂದ ಮಳಲಿ ಮಸೀದಿಯ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗುರುವಾರ ಬೆಳಗ್ಗೆ 8 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಇದನ್ನು ಓದಿ : ಪರಿಷತ್ ಚುನಾವಣೆ – ಬಿಜೆಪಿ ಟಿಕೆಟ್ ಪ್ರಕಟ – ವಿಜಯೇಂದ್ರನಿಗೆ ಹೈಕಮ್ಯಾಂಡ್ ಶಾಕ್ : ಅಚ್ಚರಿಯ ಅಭ್ಯರ್ಥಿಗಳು
ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ತಾಂಬೂಲ ಪ್ರಶ್ನೆಯ ವಿಧಾನಗಳು ನೇಪಥ್ಯಕ್ಕೆ ಹೋಗಿರುವುದಾದರೂ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಪ್ರಚಲಿತವಾಗಿರುವುದು ಕಂಡು ಬರುತ್ತದೆ.ಪ್ರಶ್ನೆಶಾಸ್ತ್ರದಲ್ಲಿ ಕವಡೆಗಳು, ತಾಂಬೂಲ ಇತ್ಯಾದಿಗಳನ್ನು ಉಪಯೋಗಿಸುವ ವಿಧಾನಗಳೂ ಪ್ರಚಲಿತದಲ್ಲಿರುತ್ತವೆ. ಅವುಗಳ ಸಂಖ್ಯೆ, ಸ್ವರೂಪ ಇತ್ಯಾದಿಗಳ ಆಧಾರದಿಂದ ಪ್ರಶ್ನೆಫಲ ಹೇಳಲಾಗುತ್ತದೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment