ತಿರುಪತಿಯಲ್ಲಿರುವ ತಿರುಮಲ ದೇವಾಲಯದಲ್ಲಿ ಕೆಲವು ವಾರಗಳ ಕಾಲ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.
ವೆಂಕಟೇಶ್ವರನ ಬೆಟ್ಟದ ದೇವಾಲಯದೊಳಗೆ ಮಂಗಳವಾರ ನಡೆಯುವ ಅಸ್ತದಳ ಪಾದಪದ್ಮರದಾನ, ಗುರುವಾರದ ತಿರುಪ್ಪವಾಡ, ಶುಕ್ರವಾರದ ನಿಜಪಾದ ದರ್ಶನಂ ಮುಂತಾದ ಸಾಪ್ತಾಹಿಕ ಸೇವೆಗಳನ್ನು ಜೂನ್ 30ರವರೆಗೆ ಸ್ಥಗಿತಗೊಳಿಸಲಾಗಿದೆ.
ಈ ಬೇಸಿಗೆಯಲ್ಲಿ ಭಾರೀ ಸಂಖ್ಯೆಯಲ್ಲಿ ದೇವಾಲಯಕ್ಕೆ ಭಕ್ತರು ಭೇಟಿ ನೀಡುವ ಹಿನ್ನೆಲೆ ಸಾಮಾನ್ಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಸಮಯ ದರ್ಶನವನ್ನು ಒದಗಿಸುವ ಉದ್ದೇಶದಿಂದ ಕೆಲವು ಸೇವೆಗಳನ್ನು ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮಾ ರೆಡ್ಡಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿ ಸಾಪ್ತಾಹಿಕ ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಮಂಗಳವಾರ ಮತ್ತು ಶುಕ್ರವಾರದಂದು ಹೆಚ್ಚುವರಿಯಾಗಿ ಸುಮಾರು 5,000 ಯಾತ್ರಾರ್ಥಿಗಳಿಗೆ ಮತ್ತು ಗುರುವಾರದಂದು 9,000 ಭಕ್ತರಿಗೆ ದರ್ಶನಕ್ಕೆ ಅನುಕೂಲವಾಗುವಂತೆ ಟಿಟಿಡಿಗೆ ಅನುವು ಮಾಡಿಕೊಡುತ್ತದೆ. ಈ ನಿರ್ಧಾರದಿಂದ ಭಕ್ತರು ವೆಂಕಟೇಶ್ವರ ದೇವಾಲಯದ ಒಳಗೆ ಹೆಚ್ಚು ಗಂಟೆಗಳ ಕಾಲ ಕಾಯಬೇಕಾಗಿಲ್ಲ ಎಂದಿದ್ದಾರೆ.