ಕ್ಲಾಸ್ಗೆ ಬಂಕ್ ಹಾಕಿ ಮೋಜು-ಮಸ್ತಿಗೆ ತೆರಳಿದ್ದ ವಿದ್ಯಾರ್ಥಿಗಳ ಕಾರು ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಘಟನೆ ಆನೇಕಲ್ನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.
ಇಲ್ಲಿನ ಭುಜಂಗ ದಾಸಯ್ಯನ ಕೆರೆಗೆ ಕಾರು ಹೋಗಿ ಬಿದ್ದಿದೆ. ಕಾರಿನಲ್ಲಿದ್ದ 7 ಜನರಲ್ಲಿ 5 ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದು ಇನ್ನಿಬ್ಬರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಹುಲ್ಲಹಳ್ಳಿಯ ಕ್ರೈಸ್ಟ್ ಕಾಲೇಜಿನ ಡಿಗ್ರಿ ವಿದ್ಯಾರ್ಥಿಗಳ ಕಾರು ಅಪಘಾತಕ್ಕೆ ಒಳಗಾಗಿದೆ.
ಕಾಲೇಜಿಗೆ ರಜೆ ಹಾಕಿ ಮೋಜು-ಮಸ್ತಿ ಮಾಡಲು ಹೋಗಿದ್ದರು ಎನ್ನಲಾಗಿದೆ. ಅತಿವೇಗವಾಗಿ ಕಾರು ಚಲಾಯಿಸಿರೋದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಲ್ಲದೇ ಪಾನಮತ್ತರಾಗಿ ಕಾರನ್ನ ಚಲಾಯಿಸುತ್ತಿದ್ದರು ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಇದನ್ನು ಓದಿ – ಕರ್ನಾಟಕದಲ್ಲಿ ಯುವತಿಯರಿಗೆ ನೌಕರಿ ಬೇಕು ಅಂದರೆ ಮಂಚ ಹತ್ತಬೇಕು: ಪ್ರಿಯಾಂಕ್ ಖರ್ಗೆ
ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೆಸಿಬಿ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ