ಕ್ಲಾಸ್ಗೆ ಬಂಕ್ ಹಾಕಿ ಮೋಜು-ಮಸ್ತಿಗೆ ತೆರಳಿದ್ದ ವಿದ್ಯಾರ್ಥಿಗಳ ಕಾರು ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಘಟನೆ ಆನೇಕಲ್ನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.
ಇಲ್ಲಿನ ಭುಜಂಗ ದಾಸಯ್ಯನ ಕೆರೆಗೆ ಕಾರು ಹೋಗಿ ಬಿದ್ದಿದೆ. ಕಾರಿನಲ್ಲಿದ್ದ 7 ಜನರಲ್ಲಿ 5 ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದು ಇನ್ನಿಬ್ಬರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಹುಲ್ಲಹಳ್ಳಿಯ ಕ್ರೈಸ್ಟ್ ಕಾಲೇಜಿನ ಡಿಗ್ರಿ ವಿದ್ಯಾರ್ಥಿಗಳ ಕಾರು ಅಪಘಾತಕ್ಕೆ ಒಳಗಾಗಿದೆ.
ಕಾಲೇಜಿಗೆ ರಜೆ ಹಾಕಿ ಮೋಜು-ಮಸ್ತಿ ಮಾಡಲು ಹೋಗಿದ್ದರು ಎನ್ನಲಾಗಿದೆ. ಅತಿವೇಗವಾಗಿ ಕಾರು ಚಲಾಯಿಸಿರೋದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಲ್ಲದೇ ಪಾನಮತ್ತರಾಗಿ ಕಾರನ್ನ ಚಲಾಯಿಸುತ್ತಿದ್ದರು ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಇದನ್ನು ಓದಿ – ಕರ್ನಾಟಕದಲ್ಲಿ ಯುವತಿಯರಿಗೆ ನೌಕರಿ ಬೇಕು ಅಂದರೆ ಮಂಚ ಹತ್ತಬೇಕು: ಪ್ರಿಯಾಂಕ್ ಖರ್ಗೆ
ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೆಸಿಬಿ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!