ಕಳೆದ ವಾರ ಮಾಗಡಿ ರಸ್ತೆಯಲ್ಲಿ ಬೈಕ್ ನಲ್ಲಿ ವೃದ್ಧನನ್ನು ಎಳೆದೊಯ್ದ ಭೀಕರ ಘಟನೆ ಮಾಸುವ ಮುನ್ನವೇ ಮತ್ತೊಂದು ಭಯಾನಕ ಘಟನೆ ನಡೆದಿದೆ.ಮಂಗಳೂರು ಡ್ರಗ್ಸ್ ದಂಧೆ – ಕೆಎಂಸಿ ಆಸ್ಪತ್ರೆಯ ವೈದ್ಯರು ವಜಾ, ವಿದ್ಯಾರ್ಥಿಗಳು ಅಮಾನತು
ಶುಕ್ರವಾರ ಬೆಳಿಗ್ಗೆ 10.30ರ ಸುಮಾರಿಗೆ ಮಹಿಳೆಯೊಬ್ಬಳು ನೆಕ್ಸನ್ ಕಾರನ್ನು ಓಡಿಸುತ್ತಿದ್ದು, ರೆಡ್ ಸಿಗ್ನಲ್ ಇದ್ದರೂ ಕಾರನ್ನು ತಂದು ಅಡ್ಡ ನಿಲ್ಲಿಸಿದ್ದಳು. ಈ ವೇಳೆ ಸಿಗ್ನಲ್ ಇರುವುದು ಕಾಣಿಸಲ್ವಾ ಎಂದು ಬೈಕ್ ಸವಾರ ಕೇಳಿದ್ದಕ್ಕೆ ಆಕೆ ಮಧ್ಯದ ಬೆರಳು ತೋರಿಸಿ ಎಸ್ಕೇಪ್ ಆಗುತ್ತಿದ್ದಳು.
ಈ ವೇಳೆ ಕಾರಿನ ಬಾನೆಟ್ ಮೇಲೆ ಹತ್ತಿ ಬೈಕ್ ಸವಾರ ಕಾರು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.
ಆದರೆ ಮಹಿಳೆ ಕಾರು ನಿಲ್ಲಿಸದೇ, ಮಂಗಳೂರು ಕಾಲೇಜಿನಿಂದ ಎರಡು ಕಿಲೋಮೀಟರ್ ಕಾರನ್ನು ವೇಗವಾಗಿ ಓಡಿಸಿದ್ದಾಳೆ.
ಬೈಕ್ ಸವಾರನ ಪರದಾಟ ನೋಡಿ ಸ್ಥಳೀಯರು ಕಾರನ್ನು ಹಿಂಬಾಲಿಸಿ ತಡೆದಿದ್ದಾರೆ. ಬಳಿಕ ಕಾರು ಜಖಂ ಮಾಡಿ, ಜ್ಞಾನಭಾರತಿ ಪೊಲೀಸ್ ಠಾಣೆಗೆ ಸ್ಥಳೀಯರು ಕಾರು ತಂದಿದ್ದಾರೆ. ಸದ್ಯ ಎರಡೂ ಕಡೆಯವರನ್ನು ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು