ಬೆಂಗಳೂರಿನ ಯುವತಿಯೊಬ್ಬಳು ಜ್ಞಾನಭಾರತಿಯ ಉಲ್ಲಾಳ ರಸ್ತೆಯ ಮಂಗಳೂರು ಕಾಲೇಜ್ ಬಳಿ ನೆಕ್ಸನ್ ಕಾರಿನ ಬಾನೆಟ್ ಮೇಲೆ ಎರಡು ಕಿಲೋಮೀಟರ್ ಬೈಕ್ ಸವಾರ ಸುತ್ತಾಡಿದ್ದಾನೆ. ಈ ಕಾರು ಪ್ರಿಯಾಂಕಾ ಹೆಸರಿನಲ್ಲಿ ನೋಂದಣಿಯಾಗಿದೆ.
ಕಳೆದ ವಾರ ಮಾಗಡಿ ರಸ್ತೆಯಲ್ಲಿ ಬೈಕ್ ನಲ್ಲಿ ವೃದ್ಧನನ್ನು ಎಳೆದೊಯ್ದ ಭೀಕರ ಘಟನೆ ಮಾಸುವ ಮುನ್ನವೇ ಮತ್ತೊಂದು ಭಯಾನಕ ಘಟನೆ ನಡೆದಿದೆ.ಮಂಗಳೂರು ಡ್ರಗ್ಸ್ ದಂಧೆ – ಕೆಎಂಸಿ ಆಸ್ಪತ್ರೆಯ ವೈದ್ಯರು ವಜಾ, ವಿದ್ಯಾರ್ಥಿಗಳು ಅಮಾನತು
ಶುಕ್ರವಾರ ಬೆಳಿಗ್ಗೆ 10.30ರ ಸುಮಾರಿಗೆ ಮಹಿಳೆಯೊಬ್ಬಳು ನೆಕ್ಸನ್ ಕಾರನ್ನು ಓಡಿಸುತ್ತಿದ್ದು, ರೆಡ್ ಸಿಗ್ನಲ್ ಇದ್ದರೂ ಕಾರನ್ನು ತಂದು ಅಡ್ಡ ನಿಲ್ಲಿಸಿದ್ದಳು. ಈ ವೇಳೆ ಸಿಗ್ನಲ್ ಇರುವುದು ಕಾಣಿಸಲ್ವಾ ಎಂದು ಬೈಕ್ ಸವಾರ ಕೇಳಿದ್ದಕ್ಕೆ ಆಕೆ ಮಧ್ಯದ ಬೆರಳು ತೋರಿಸಿ ಎಸ್ಕೇಪ್ ಆಗುತ್ತಿದ್ದಳು.
ಈ ವೇಳೆ ಕಾರಿನ ಬಾನೆಟ್ ಮೇಲೆ ಹತ್ತಿ ಬೈಕ್ ಸವಾರ ಕಾರು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.
ಆದರೆ ಮಹಿಳೆ ಕಾರು ನಿಲ್ಲಿಸದೇ, ಮಂಗಳೂರು ಕಾಲೇಜಿನಿಂದ ಎರಡು ಕಿಲೋಮೀಟರ್ ಕಾರನ್ನು ವೇಗವಾಗಿ ಓಡಿಸಿದ್ದಾಳೆ.
ಬೈಕ್ ಸವಾರನ ಪರದಾಟ ನೋಡಿ ಸ್ಥಳೀಯರು ಕಾರನ್ನು ಹಿಂಬಾಲಿಸಿ ತಡೆದಿದ್ದಾರೆ. ಬಳಿಕ ಕಾರು ಜಖಂ ಮಾಡಿ, ಜ್ಞಾನಭಾರತಿ ಪೊಲೀಸ್ ಠಾಣೆಗೆ ಸ್ಥಳೀಯರು ಕಾರು ತಂದಿದ್ದಾರೆ. ಸದ್ಯ ಎರಡೂ ಕಡೆಯವರನ್ನು ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸುತ್ತಿದ್ದಾರೆ.
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK