crime

ಹಾವೇರಿ ಬಳಿ ಭೀಕರ ರಸ್ತೆ ಅಪಘಾತ: ಭದ್ರಾವತಿಯ 13 ಮಂದಿ ದುರಂತ ಸಾವು

ಹಾವೇರಿ : ದೇವಸ್ಥಾನಕ್ಕೆ ತೆರಳಿ ಸ್ವಗ್ರಾಮಕ್ಕೆ ವಾಪಸ್ಸು ಆಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಟಿಟಿವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 13 ಧಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ

ಈ ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿ 13 ಜನ ಮೃತಪಟ್ಟಿದ್ದಾರೆ. 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತಪಟ್ಟವರನ್ನು ಪರಶುರಾಮ್​​(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಂನಹಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ. ಈ ಘಟನೆಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಟಿ ವಾಹನದಲ್ಲಿದ್ದ ಒಟ್ಟು 17 ಜನರು ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಹಿಳೆಯರು, ಇಬ್ಬರು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಚಾಲಕ ಒಳಗೊಂಡಿದ್ದಾರೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್​ ವರಿಷ್ಠಾದಿಕಾರಿ ಅಂಶಿಕುಮಾರ್ ತಿಳಿಸಿದ್ದಾರೆ.ರಾಜ್ಯದಲ್ಲಿ ‘ಡೇಂಘಿ’ ಜ್ವರಕ್ಕೆ ಹಾವೇರಿಯಲ್ಲಿ ಮೊದಲ ಬಲಿ

ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಹೆಚ್ಚಿನ ವಿವರ ಕಲೆಹಾಕುತ್ತಿದ್ದಾರೆ.

Team Newsnap
Leave a Comment

Recent Posts

ವೀರಪ್ಪ ಮೊಯಿಲಿ ಪುತ್ರಿ ಹಂಸ ಮೊಯಿಲಿ ನಿಧನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಮಾರ್ಪಾಡಿ ವೀರಪ್ಪ ಮೊಯಿಲಿ ಅವರ ಕಿರಿಯ ಪುತ್ರಿ ಹಂಸ… Read More

June 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,150 ರೂಪಾಯಿ ದಾಖಲಾಗಿದೆ. 24… Read More

June 30, 2024

ವಿಶ್ವಕಪ್‌ ಗೆಲುವಿನೊಂದಿಗೆ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್‌ ಕೊಹ್ಲಿ

ಭಾರತೀಯ ಕ್ರಿಕೆಟ್ ತಂಡ ಎರಡನೇ ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಗೆದ್ದ ಬೆನ್ನಲ್ಲೇ ವಿರಾಟ್‌ ಕೊಹ್ಲಿ (Virat… Read More

June 30, 2024

ಸರ್ವೀಸ್ ರಸ್ತೆಗೆ ನುಗ್ಗಿದ ಬಸ್ : ಕಾರು, ಬೈಕ್ ಗಳು ಜಖಂ – ಚಾಲಕನಿಗೆ ಗಂಭೀರ ಗಾಯ

ಮಂಡ್ಯ : ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್‌ ರಸ್ತೆಯಿಂದ ಸರ್ವೀಸ್‌ ರಸ್ತೆಗೆ ನುಗ್ಗಿ ಹಳ್ಳಕ್ಕೆ… Read More

June 29, 2024

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಸಜೀವ ದಹನ

ಚೆನ್ನೈ : ಇಂದು ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು ,ಮೂವರು ಸಾವನ್ನಪ್ಪಿದ್ದಾರೆ ಮತ್ತು… Read More

June 29, 2024

ಕೆ ಆರ್ ಎಸ್ ಗೆ 18 ಸಾವಿರ ಕ್ಯುಸೆಕ್ ಒಳಹರಿವು -92.80 ಅಡಿ ನೀರು – ಕಬಿನಿಗೆ 17 ಸಾವಿರ ಕ್ಯುಸೆಕ್ ನೀರು ಒಳ ಹರಿವು

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯಗಳಿಗೆ ಒಳ ಹರಿವು ಕೊಂಚ ತಗ್ಗಿದೆ. Join WhatsApp Group ಕೆಆರ್ ಎಸ್… Read More

June 29, 2024