ಎಲ್ಲವೂ ಅಂದುಕೊಂಡಂತೆ ಆದರೆ ಈ ವರ್ಷಾಂತ್ಯದಲ್ಲಿ ಭಾರತದಲ್ಲಿ ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಅಮೆರಿಕದ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಯು ಭಾರತದಲ್ಲಿ ಮಾರಾಟವನ್ನು ಪ್ರಾರಂಭಿಸುತ್ತದೆ. ನಂತರ ಬೇಡಿಕೆಯ ಅನುಸಾರವಾಗಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ತಯಾರಿಕೆಗೆ ಮುಂದಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ಟೆಸ್ಲಾ ಕಂಪನಿ ಬೆಂಗಳೂರಿನಲ್ಲಿ ತನ್ನ ಸಂಶೋಧನಾ ಮತ್ತು ಅಭಿವೃದ್ಧಿ ಘಟಕ ಸ್ಥಾಪಿಸಿದ ಬೆನ್ನಲ್ಲೇ ಯಾವ ಕಾರನ್ನು ಭಾರತದಲ್ಲಿ ಬಿಡುಗಡೆ ಮಾಡಬಹುದು ಎಂಬುದರ ಬಗ್ಗೆ ಈಗ ಚರ್ಚೆ ಬೆನ್ನಲ್ಲೇ ಈ ಪ್ರಕಟನೆ ಹೊರ ಬಿದ್ದಿದೆ.
ಕಳೆದ ವರ್ಷ ಮಾರುಕಟ್ಟೆಯಲ್ಲಿ ಸೂಪರ್ ಹಿಟ್ ಆಗಿರುವ ಮಾಡೆಲ್ 3 ಕಾರನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಬಹುದು ಎಂಬ ವಿಶ್ಲೇಷಣೆ ಈಗ ಕೇಳಿ ಬಂದಿದೆ.
ಕಾರಿನ ಬೆಲೆ 60 ಲಕ್ಷ ರು ?
ಟೆಸ್ಲಾ ಯಾವ ಕಾರನ್ನು ಬಿಡುಗಡೆ ಮಾಡಬಹುದು ಎಂಬುದು ಅಧಿಕೃತವಾಗಿ ಹೇಳಿಲ್ಲ. ಆದರೆ ಮಾಡೆಲ್ 3 ಸೆಡಾನ್ ಕಾರು ಬಿಡುಗಡೆ ಮಾಡಬಹುದು ಎಂದು ನಿರೀಕ್ಷಿಸಲಾಗುತ್ತಿದೆ.
ಈ ಕಾರಿನ ಬೆಲೆ 55 ರಿಂದ 60 ಲಕ್ಷ ಎಂದು ನಿರೀಕ್ಷಿಸಲಾಗಿದ್ದು ಮುಂದಿನ ತಿಂಗಳು ಭಾರತದಲ್ಲಿ ಬುಕ್ಕಿಂಗ್ ಪ್ರಾರಂಭವಾಗುವ ಸಾಧ್ಯತೆಯಿದೆ. ಐಷಾರಾಮಿ ಕಾರುಗಳಿಗೆ ಹೆಸರಾದ ಮರ್ಸಿಡಿಸ್ ಬೆಂಜ್ ಕಾರುಗಳಿಗೆ ಟೆಸ್ಲಾ ಕಂಪನಿಯ ಕಾರುಗಳು ಸ್ಪರ್ಧೆ ನೀಡುತ್ತಿವೆ
ಮಾಡೆಲ್ 3 ವಿಶೇಷತೆ ಏನು ?
ಟೆಸ್ಲಾ ಬಿಡುಗಡೆ ಮಾಡಿದ ಕಾರುಗಳ ಪೈಕಿ ಅತ್ಯಂತ ಒಳ್ಳೆಯ ಮಾದರಿ ಇದಾಗಿದೆ. ಈ ಕಾರನ್ನು 2017ರಲ್ಲಿ ವಿಶ್ವದಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗಿತ್ತು. ವಿಶ್ವದಲ್ಲೇ ಅತೀ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರು ಎಂಬ ಹೆಗ್ಗಳಿಕೆ ಈ ಕಾರಿಗೆ ಪಡೆದುಕೊಂಡಿದೆ.
ಎರಡು ಮಾದರಿಯಲ್ಲಿ ಮಾಡೆಲ್ 3 ಕಾರು ಬಿಡುಗಡೆಯಾಗಿದೆ. ಲಾಂಗ್ ರೇಂಜ್ ಮಾದರಿಯ ಕಾರು ಒಮ್ಮೆ ಚಾರ್ಜ್ ಮಾಡಿದರೆ 500 ಕಿ.ಮೀ ಕ್ರಮಿಸಿದರೆ, ಸ್ಟಾಡಂರ್ಡ್ ಮಾದರಿಯ ಕಾರು 354 ಕಿ.ಮೀ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. 15 ನಿಮಿಷದಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಆಗುತ್ತದೆ. ಗರಿಷ್ಟ 162 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಈ ಕಾರಿಗಿದೆ.
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
This website uses cookies.
Leave a Comment