ಬೀದರ್-ಬೆಂಗಳೂರು ಮಧ್ಯೆ ವಾರದಲ್ಲಿ ನಾಲ್ಕು ದಿನ ಸಂಚರಿಸಲಿರುವ ಸ್ಟಾರ್ ಏರ್ ವಿಮಾನ ಸೇವೆಗೆ ಜೂನ್ 15 ರಂದು ಚಾಲನೆ ಸಿಗಲಿದೆ.ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ವಿಮಾನ ಸೇವೆಗೆ ಚಾಲನೆ ನೀಡಲಿದ್ದಾರೆ.
ಬೀದರ್-ಬೆಂಗಳೂರು ನಡುವಣ ಪ್ರಯಾಣ ವೆಚ್ಚ ಎಲ್ಲ ತೆರಿಗೆಗಳು ಸೇರಿದಂತೆ ₹ 2,599 ಇದೆ. 50 ನಿಮಿಷಗಳಲ್ಲಿ ಬೀದರ್ನಿಂದ ಬೆಂಗಳೂರಿಗೆ ತಲುಪಲಿದೆ. ವಿಮಾನದಲ್ಲಿ 50 ಜನ ಆರಾಮಾಗಿ ಪ್ರಯಾಣಿಸಬಹುದಾಗಿದೆ.ವಿಮಾನ ಭಾನುವಾರ, ಸೋಮವಾರ, ಬುಧವಾರ ಹಾಗೂ ಶುಕ್ರವಾರ ಸೇವೆ ಒದಗಿಸಲಿದೆ.
ಬೀದರ್-ಬೆಂಗಳೂರು ಮಧ್ಯೆ ಸಂಚರಿಸಲಿರುವ ಸ್ಟಾರ್ ಏರ್ ವಿಮಾನ ಸೇವೆ ಆರಂಭದ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಜೂನ್ 15 ರಂದು ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಬಂಧಿಸಿದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚಿಸಿದರು.
ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್, ಲೈಟಿಂಗ್ ಲ್ಯಾಂಪ್, ರಿಬ್ಬನ್ ಕತ್ತರಿಸುವ ಮೂಲಕ ಸ್ವಾಗತಿಸಲಾಗುವುದು. ವಿಮಾನದಲ್ಲಿ ಮೊದಲು ಬರುವ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ಹಾಗೂ ಇತರ ಎಲ್ಲ ಪ್ರಮಾಣಿಕರಿಗೆ ಕಾಣಿಕೆ ನೀಡಲಾಗುವುದು ಎಂದು ಹೇಳಿದರು.
ಬೀದರ್ ವಿಮಾನ ನಿಲ್ದಾಣದ ನಿರ್ದೇಶಕ ಅಮೀತ್ ಮಿಶ್ರಾ ಮಾತನಾಡಿ, ಸ್ಟಾರ್ ಏರ್ ವಿಮಾನ ಜೂನ್ 15 ರಂದು ಮಧ್ಯಾಹ್ನ 2.55ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 4.05ಕ್ಕೆ ಬೀದರ್ ತಲುಪಲಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್ ಉಪ ವಿಭಾಗಾಧಿಕಾರಿ ನಯೀಮ್ ಮೊಮಿನ್ ಇದ್ದರು.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್