ಮನುಷ್ಯ ಒಂದು ಪ್ರಾಣಿ. ಅವನನ್ನು ಸಹ ಹಣ ಪ್ರಚಾರ ಮುಂತಾದ ಆಮಿಷಗಳಿಂದ ಆಕರ್ಷಿಸಿ ಒಂದು ಬೋನಿನಲ್ಲಿ ಕೂಡಿ ಹಾಕಿ ಪ್ರಾಣಿಯಂತೆ ಆಡಿಸಿ ಜನರಿಗೆ ಮನರಂಜನೆ ನೀಡಿ ಹಣ ಮಾಡಬಹುದು. ಹೆಚ್ಚು ಕಡಿಮೆ ಒಂದು ಸರ್ಕಸ್ ಕಂಪನಿಯಂತೆ. ಅದನ್ನು ಟಿವಿ ಮಾಧ್ಯಮ ಮಾಡುತ್ತಿದೆ. ಅದೇ ಬಿಗ್ ಬಾಸ್……….
ಹಾಡು ಕುಣಿತ ಪ್ರಶ್ನೋತ್ತರ ಮುಂತಾದ ಪ್ರತಿಭಾ ಪ್ರದರ್ಶನದ ರಿಯಾಲಿಟಿ ಶೋನಲ್ಲಿ ಇರುವ ಸಹಜತೆ ಇಲ್ಲಿ ಇರುವುದಿಲ್ಲ. ಉದ್ದೇಶ ಪೂರ್ವಕವಾಗಿ ಒತ್ತಡದಿಂದ ಅಲ್ಲಿನ ಸ್ಪರ್ಧಿಗಳನ್ನು ಒಬ್ಬರು ನಿಯಂತ್ರಿಸುತ್ತಾರೆ ಮತ್ತು ಪ್ರಚೋದಿಸುತ್ತಾರೆ. ಅದನ್ನು ಹೀಗೆ ಹೇಳಬಹುದು….
ಬೋನಿನಲ್ಲಿ ಕೋತಿಗಳ ಕಲರವ,
ಕಪಿ ಚೇಷ್ಟೆಗಳು,
ಧ್ವನಿಯ ಮುಖಾಂತರ ಆಡಿಸುವ ರಿಂಗ್ ಮಾಸ್ಟರ್ ನ ಕುಛೇಷ್ಟೆ,
ಎಲ್ಲಾರೂ ಮಾಡುವುದು ಹೊಟ್ಟೆಗಾಗಿ,
ಗೇಣು ಬಟ್ಟೆಗಾಗಿ, ಹೆಸರ ಮೂಟೆಗಾಗಿ,
ಆದರೆ ಹೇಳುವುದು ಮಾತ್ರ ಮನೋರಂಜನೆಗಾಗಿ, ಅಭಿಮಾನಿಗಳಿಗಾಗಿ,
ಮಾಡುವುದು ವಿಕೃತ ಮನಸ್ಸಿನ ಅನಾವರಣ,
ಹೇಳುವುದು ಮಾನಸಿಕ ಗಟ್ಟಿತನದ ಪ್ರದರ್ಶನ,
ಅಸಹನೀಯ —ನಾಟಕೀಯ —-ವರ್ತನೆ,
ನಾನಿರುವುದೇ ಹೀಗೆ ಎಂಬ ಕಪಟ ಸಮರ್ಥನೆ,
ಇದು ಅನುಕರಣೀಯವೋ, ಅನುಸರಣೀಯವೋ,
ನಗಬೇಕೋ, ಅಳಬೇಕೋ,
ದ್ವಂದ್ವ ಬಹುಜನರದ್ದು,
ಇದುವೇ ಜನಪ್ರಿಯ TV ಕಾರ್ಯಕ್ರಮ,
ಅದುವೇ ಬಿಗ್ ಬಿಗ್ ಬಿಗ್ ಬಾಸ್.
ಕಾರ್ಯಕ್ರಮಗಳನ್ನು ಮಾಡುವ ಸ್ವಾತಂತ್ರ್ಯ ಅವರಿಗೂ ಇದೆ. ನೋಡುವ ಅಥವಾ ನೋಡದಿರುವ ಸ್ವಾತಂತ್ರ್ಯ ನಮಗೂ ಇದೆ,
ಕೋಪ ನಿಯಂತ್ರಿಸಲು – ನನ್ನನ್ನು ನಾನು ಹುಡುಕಲು ಇಲ್ಲಿಗೆ ಬಂದೆ ಎನ್ನುವರು,
ಹಾಗಾದರೆ ಇಷ್ಟು ದಿನದ ಹೊರಗಿನ ಬದುಕು ಅಸಹಜವೇ,
ಪ್ರಶ್ನೆಗಳು ಏಳುತ್ತಲೇ ಇರುತ್ತವೆ,
ಉತ್ತರವೂ ನಮಗೆ ತೋಚಿದಂತೆ,
ಸಿನಿಮಾ ಧಾರವಾಹಿಗಳ ಕಥೆಯೂ ಇದೇ ಅಲ್ಲವೇ, ಇಲ್ಲೊಂದಿಷ್ಟು ಹೆಚ್ಚು ಅತಿರೇಕ,
ಜಗವೇ ಒಂದು ನಾಟಕ ರಂಗ,
ನಾವು ಪಾತ್ರಧಾರಿಗಳು,
ಸೂತ್ರಧಾರಿ ಇನ್ಯಾರೋ ಒಂದು ಮಾಯೆ ಎಂಬ ನಂಬಿಕೆ – ಹುಡುಕಾಟ,
ಮಾನವ ಜನ್ಮ ಶ್ರೇಷ್ಠ ಎನ್ನುವವರು ಕೆಲವರು,
ಬದುಕೊಂದು ನಶ್ವರ ಎನ್ನುವವರು ಹಲವರು,
ಜೀವನ ದೀರ್ಘ ಪಯಣ ಅದನ್ನು ಅನುಭವಿಸು ಎಂದರೆ,
ಇಲ್ಲ, ಅದು ಕ್ಷಣಿಕ, ಬೇಗ ಸಾರ್ಥಕತೆಯ ಕಡೆ ಮುನ್ನಡೆ ಎಂಬ ಅರ್ಥವೂ ಉಂಟು,
ಸಹಜತೆಯಲ್ಲೊಂದು ಅಸಹಜತೆ,
ನಿಯಂತ್ರಣದಲ್ಲೊಂದು ಅಸಹಾಯಕತೆ,
ಸತ್ಯದಲ್ಲೊಂದು ಮಿಥ್ಯೆ,
ಅರಿವಿನಲ್ಲೊಂದು ನಿಗೂಡತೆ,
ಬದುಕೆಂಬ ಸರ್ಕಸ್ ಕಂಪೆನಿಯಲ್ಲಿ ನಾವು ನೀವು ಅಭಿನಯಿಸಲೇ ಬೇಕು ಉಸಿರು ನಿಲ್ಲುವವರೆಗೂ……
ನಮ್ಮ ನಮ್ಮ ಅರಿವಿನ ಮಿತಿಯಲ್ಲಿ….
ಸರಿ ತಪ್ಪುಗಳ, ವಾದ ವಿವಾದಗಳ ನಿರಂತರ ಅನಂತ ಪ್ರಯೋಗದ ಪಯಣದಲ್ಲಿ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment