ನಿರ್ಮಾಣ ಹಂತದ ಕಟ್ಟಡದ 3ನೇ ಮಹಡಿಯಿಂದ ಬಿದ್ದು ಮೂವರು ಕೂಲಿ ಕಾರ್ಮಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ನಡೆದಿದೆ.
ಮೂವರು ಕಾರ್ಮಿಕರು ಸಿಮೆಂಟ್ ಪ್ಲಾಸ್ಟಿಂಗ್ ಕೆಲಸ ಮಾಡುತ್ತಿದ್ದರು. ಕೂಲಿ ಕಾರ್ಮಿಕರು ಮುಂಜಾಗ್ರತೆ ವಹಿಸದೆ ಕೆಲಸದಲ್ಲಿ ತೊಡಗಿಕೊಂಡಿರುಗುದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಸಿಮೆಂಟ್ ಪ್ಲಾಸ್ಟರಿಂಗ್ ಮಾಡುತ್ತಿದ್ದ ವೇಳೆ 3 ನೇ ಅಂತಸ್ತಿನಿಂದ ಮರ ಮುರಿದು ಬಿದ್ದ ಪರಿಣಾಮ ಕಾರ್ಮಿಕರು ನೆಲಕ್ಕೆ ಉರುಳಿ ಬಿದ್ದಿದ್ದಾರೆ. PSI ಹುದ್ದೆ : ಮರು ಪರೀಕ್ಷೆಗೆ ಹೈಕೋರ್ಟ್ ತಡೆ – ಪೌಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಗಂಭೀರವಾಗಿ ಗಾಯಗೊಂಡಿದ್ದ ಮೂವರು ಕೂಲಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಚನ್ನಮ್ಮನ ಕೆರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.