ಪ್ರೀತಿಸಿ ಅವಳನ್ನು ಕೈಯಾರೆ ಕೊಲೆ ಮಾಡಿ, ನಂತರ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ
ಪ್ರಿಯತಮೆಯನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಶರಣಾದ ಪಾಗಲ್ ಪ್ರೇಮಿ- ಮೈಸೂರಿನ ಹೋಟೆಲ್ ನಲ್ಲಿ ನಡೆದಿರುವ ಘಟನೆ ಮೈಸೂರಿನ ಹೆಬ್ಬಾಳ ಹೋಟೆಲ್ ನಲ್ಲಿ ಕಳೆದ ರಾತ್ರಿ ನಡೆದಿದೆ.
ಮಂಡ್ಯದವರಾದ ಅಮೂಲ್ಯ ಕೊಲೆಯಾಗಿದ್ದಾರೆ. ಲೋಕೇಶ್ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ಅಮೂಲ್ಯ ಮೊದಲ ವರ್ಷದ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಲೋಕೇಶ್ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದನು.
ಮೈಸೂರಿನ ಹೆಬ್ಬಾಳು ಬಡಾವಣೆಯ ಹೋಟೆಲ್ ಗೆ ನಿನ್ನೆ ಮಧ್ಯಾಹ್ನ ಆಗಮಿಸಿದ್ದ ಪ್ರೇಮಿಗಳು.ರೂಮಿನಲ್ಲೇ ಉಳಿದುಕೊಂಡಿದ್ದಾರೆ.
ರಾತ್ರಿ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡ ಹೋಟೆಲ್ ಸಿಬ್ಬಂದಿಗಳು ಬಾಗಿಲು ತೆರೆದು ನೋಡಿದಾಗ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂತು. ಅಮೂಲ್ಯ ಕೊಲೆಯಾಗಿದ್ದಾಳೆ ಎನ್ನುವುದು ಗೊತ್ತಾಯಿತು.
ರೂಂ ನಲ್ಲಿ ಉಳಿದುಕೊಂಡಿದ್ದ ಅಮೂಲ್ಯ ಹಾಗೂ ಲೋಕೇಶ್ ಮಾತು ಕತೆ ಮಾಡಿದ ನಂತರ ಸಾಯುವ ನಿರ್ಧಾರ ಮಾಡಿದ್ದಾರೆ. ಮೊದಲಿಗೆ ಹಗ್ಗದಲ್ಲಿ ಕತ್ತು ಬಿಗಿದು ಅಮೂಲ್ಯಳನ್ನು ಲೋಕೇಶ್ ಕೊಲೆ ಮಾಡಿದ್ದಾನೆ.
ಆಕೆಯನ್ನು ಸಾಯಿಸಿದ ಮೇಲೆ ಸ್ನೇಹಿತರಿಗೆ ಕರೆ ಮಾಡಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾನೆ
ಅಮೂಲ್ಯಳನ್ನು ನಾನೇ ಕೊಲೆ ಮಾಡಿದೆ. ಈಗ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಗೆಳೆಯರಿಗೆ ದೂರವಾಣಿ ಮೂಲಕ ಹೇಳಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ.
ಕೊಲೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಡಿಸಿಪಿ ಪ್ರಕಾಶ್ ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment