ನದಿದಡದಲ್ಲಿ ನೀರು ಕುಡಿಯುತ್ತಿದ್ದ ೧೨ ವರ್ಷದ ಬಾಲಕನನ್ನು ಮೊಸಳೆ ಎಳೆದೊಯ್ದ ದಾರುಣ ಘಟನೆ ರಾಯಚೂರು ತಾಲೂಕು ಡೊಂಗರಾಂಪುರ ಬಳಿಯ ಕೃಷ್ಣ ನದಿಯಲ್ಲಿ ಬುಧವಾರ ನಡೆದಿದೆ.
ಬಾಲಕ ಮಲ್ಲಿಕಾರ್ಜುನ ತನ್ನ ಐವರು ಗೆಳೆಯರ ಜತೆ ದನಮೇಯಿಸಲು ಮಧ್ಯಾಹ್ನ ಸುಮಾರು ೨ ರ ಸಮಯದಲ್ಲಿ ಹೋಗಿದ್ದು, ನೀರು ಕುಡಿಯುತ್ತಿದ್ದ ಈ ಬಾಲಕನನ್ನು ಮೊಸಳೆ ಎಳೆದುಕೊಂಡು ಹೋದ ವಿಷಯ ಬಾಲಕರಿಂದ ಗ್ರಾಮಸ್ಥರಿಗೆ ತಿಳಿಯಿತು.
ಎರಡು ತೆಪ್ಪದಲ್ಲಿ ಸ್ಥಳೀಯ ಮೀನುಗಾರರು ನಾಪತ್ತೆಯಾದ ಮಲ್ಲಿಕಾರ್ಜುನನನ್ನು ಹುಡುಕಾಡಿದರು ಪತ್ತೆಯಾಗಲಿಲ್ಲ. ರಾತ್ರಿಯಾದ ಕಾರಣ ಹುಡುಕುವ ಕಾರ್ಯ ಸ್ಥಗಿತಗೊಂಡಿದ್ದು, ಗುರುವಾರ ಬೆಳಗ್ಗೆಯಿಂದ ಕಾರ್ಯಾಚರಣೆ ಮುಂದುವರಿಯಲಿದೆ. ನದಿಯ ತಗ್ಗುಪ್ರದೇಶಗಳಲ್ಲಿ ಹೆಚ್ಚಾಗಿ ನೀರು ನಿಂತಿದ್ದು, ಈ ಭಾಗಗಳಲ್ಲಿ ಮೊಸಳೆಗಳ ಕಾಟ ವಿಪರೀತವಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು