ತಂದೆಯ ತಿಥಿ ಕಾರ್ಯದ ದಿನವೇ ಸಿಲಿಂಡರ್ ಸ್ಪೋಟಗೊಂಡು ಮಗಳ ದಾರುಣ ಸಾವು

Team Newsnap
1 Min Read

ತಂದೆಯ ತಿಥಿ ಕಾರ್ಯಕ್ಕೆಂದು ಮಗಳು ಅಡುಗೆ ಮಾಡುವಾಗ ಸಿಲಿಂಡರ್ ಸ್ಪೋಟ ಗೊಂಡು ಧಾರುಣವಾಗಿ ಸಾವನ್ನಪ್ಪಿದ
ಘಟನೆ ಬೆಂಗಳೂರಿನ ಕೆ ಎಸ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಗಳು ಪರಮೇಶ್ವರಿ (42) ಮೃತ ಮಹಿಳೆ.

ಮನೆ ಚಿಕ್ಕದಾಗಿದ್ದು ಕೋಣೆಯಲ್ಲೇ ಸ್ಟೌವ್ ಇಟ್ಟು ಅಡುಗೆ ಮಾಡಲು ತಯಾರಿ ನಡೆಸಿದ್ದರು.

ಇದೇ ವೇಳೆ ಗ್ಯಾಸ್ ಸೋರಿಕೆಯಾಗಿ ಸ್ಟೌವ್ ಬೆಂಕಿಯ ತೀವ್ರತೆಗೆ ಗ್ಯಾಸ್ ಫ್ಲೇಮ್ ದೊಡ್ಡದಾಗಿ ಹೊತ್ತಿಕೊಂಡಿದೆ.

ಬೆಂಕಿಯ ತೀವ್ರತೆಯ ಪರಿಣಾಮ ಕಾಶಿನಾಥ್‍ರ ಪತ್ನಿ ಸೌಭಾಗ್ಯ (75) ದೇಹ ಹೆಚ್ಚು ಸುಟ್ಟಿದೆ. ಮಗ ಶರವಣ (43) ತಲೆ ಮತ್ತು ಕೈ ಕಾಲು, ಹೊಟ್ಟೆ ಭಾಗ ಸುಟ್ಟಿದೆ. ಸಂಬಂಧಿ ಪರಮಶಿವಂ (47) ಕೈ ಕಾಲು ಸುಟ್ಟು ಹೋಗಿದೆ.

ಪರಮಶಿವಂ ಪತ್ನಿ ಭುವನೇಶ್ವರಿ (40) ತಲೆ, ಕೈ ಮತ್ತು ಒಂದು ಕಾಲು ಸುಟ್ಟಿದೆ. ಮತ್ತೊಬ್ಬ ಸಂಬಂಧಿ ಮಾಲಾ (60) ಕೈ , ಕತ್ತಿನ ಭಾಗ ಸುಟ್ಟಿದ್ದು, ಗಾಯಾಳುಗಳಿಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article
Leave a comment