ಅರಣ್ಯ ಪ್ರದೇಶದಲ್ಲಿ ಮರಿ ಜೊತೆ ಇದ್ದ ಆನೆ ಮೇಲೆ ಜೆಸಿಬಿ ಚಾಲಕ ಜೆಸಿಬಿಯಲ್ಲಿ ಹೆದರಿಸಿ ಹಿಂದೆ ಓಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತಣಿಗೇಬೈಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಅರಣ್ಯಪ್ರದೇಶದಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಮೂಕಪ್ರಾಣಿಗಳ ಮೇಲೆ ಜೆಸಿಬಿಯಲ್ಲಿ ದೌರ್ಜನ್ಯ ಎಸಗಿದ ಜೆಸಿಬಿ ಸಿಬ್ಬಂದಿಯೇ ಅದನ್ನು ವೀಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ. ಇದೀಗ ವೀಡಿಯೋ ವೈರಲ್ ಆಗಿದೆ
ಅಭಯಾರಣ್ಯದಲ್ಲಿ ಯಂತ್ರಗಳ ಮೂಲಕ ಕೆಲಸ ಮಾಡುವುದಕ್ಕೆ ಆರಂಭದಿಂದಲೂ ಇಲಾಖೆ ಮೇಲೆ ಅಸಮಾಧಾನವಿದೆ. ಈ ಮಧ್ಯೆ ಅರಣ್ಯದಲ್ಲಿನ ರಸ್ತೆಯನ್ನು ಅಭಿವೃದ್ದಿಪಡಿಸಲು ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ಮೂಲಕ ಕೆಲಸವನ್ನು ನೀಡಲಾಗಿದೆ.
ಗುತ್ತಿಗೆದಾರರು ಅಭಯಾರಣ್ಯದೊಳಗೆ ಜೆಸಿಬಿಯನ್ನು ಬಳಸಿ ರಸ್ತೆ ಅಭಿವೃದ್ಧಿಪಡಿಸುತ್ತಿರುವುದು ಕೂಡ ಪರಿಸರವಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ತಣಿಗೇಬೈಲು ಪ್ರದೇಶದಲ್ಲಿ ರಸ್ತೆಯನ್ನು ಅಭಿವೃದ್ಧಿ ಕಾಮಗಾರಿ ನಡೆಯುವ ವೇಳೆ ಕಾಡಾನೆಗಳ ಹಿಂಡು ಎದುರಾಗಿದೆ. ಈ ವೇಳೆ ವನ್ಯಜೀವಿಗಳ ಸುಗಮ ಸಂಚಾರಕ್ಕೆ ಅವಕಾಶ ನೀಡದೆ. ಮೂಕಪ್ರಾಣಿಗಳಿಗೆ ಜೆಸಿಬಿಯಿಂದ ಹೆದರಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು