ಕೌಟುಂಬಿಕ ಕಲಹ ತಾಯಿ, ಮಗನ ಆತ್ಮಹತ್ಯೆಯಲ್ಲಿ ಅಂತ್ಯ

Team Newsnap
1 Min Read

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗನೊಂದಿಗೆ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ನೊಂದು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನನ ಹೂಗ್ಯಂ ಗ್ರಾಮದಲ್ಲಿ ಜರುಗಿದೆ.

ತಮಿಳುನಾಡಿನ ಬರಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಜ್ಜಲ ಪಾಳ್ಯ ಗ್ರಾಮದ ಚಿನ್ನಮ್ಮ (35), ಮಗ ಮಹದೇವಸ್ವಾಮಿ (14) ಆತ್ಮಹತ್ಯೆ ಮಾಡಿಕೊಂಡವರು.

ನೆರೆಯ ತಮಿಳುನಾಡಿನಿಂದ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಬಂದು ನೆಲೆಸಿದ್ದರು.

ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಜಮೀನನ್ನು ಗುತ್ತಿಗೆ ಪಡೆದು ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಕುಟುಂಬದಲ್ಲಿ ಸದಾ ಕಲಹ ನಡೆಯುತ್ತಿತ್ತು. ಬುಧವಾರ ರಾತ್ರಿ ಕುಟುಂಬ ಕಲಹದಿಂದ ಬೇಸತ್ತು ಹೂಗ್ಯಂ ಗ್ರಾಮದ ಸಮೀಪ ಇರುವ ಜಲಾಶಯದಲ್ಲಿ ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.

ಗ್ರಾಮಸ್ಥರು ಗುರುವಾರ ಬೆಳಿಗ್ಗೆ ನೀರಿನಲ್ಲಿ ತೇಲುತ್ತಿರುವ ಶವಗಳನ್ನು ನೋಡಿ ರಾಮಪುರ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ರಾಮಪುರ ವೃತ್ತನಿರೀಕ್ಷಕ ನಂಜುಂಡಸ್ವಾಮಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment