Trending

ವಿದ್ಯಾಗಮ ಯೋಜನೆ ವೈಫಲ್ಯ ಎನ್ನುವುದು ತಪ್ಪು: ಶಿಕ್ಷಣ ಸಚಿವ

ಕಲಬುರ್ಗಿ ಜಿಲ್ಲೆಯಲ್ಲಿ ವಠಾರ ಶಾಲೆಯ ಶಿಕ್ಷಕರು ಮತ್ತು ನಾಲ್ಕು ಮಕ್ಕಳಿಗೆ ಕೊರೋನಾ ಸೋಂಕು ತಗುಲಿರುವ ಸಂಗತಿ ಈಗ ಸರ್ಕಾರದ ವಿದ್ಯಾಗಮ ಯೋಜನೆಯ ಮೇಲೆ ಕರಿನೆರಳು ಬಿದ್ದಿದೆ. ಆದರೆ, ವಿದ್ಯಾಗಮ ಯೋಜನೆ ಮುಂದುವರಿಯುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿದ್ಯಾಗಮ ಯೋಜನೆಯ ತರಗತಿಗಳಿಂದ ಮಕ್ಕಳಿಗೆ ಕೊರೋನಾ ಸೋಂಕು ತಗುಲಿಲ್ಲ. ಜನರು ವಿದ್ಯಾಗಮ ಯೋಜನೆಯನ್ನೇ ವೈಫಲ್ಯ ಎಂದು ಬಿಂಬಿಸಿರುವುದುವ ವಿಷಾದನೀಯ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯಾದ್ಯಂತ 49.34 ಲಕ್ಷ ಮಕ್ಕಳು ವಿದ್ಯಾಗಮ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಇದರಲ್ಲಿ 2 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಶಿಕ್ಷಕರು ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ವಿದ್ಯಾಗಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ಕೊರೋನಾ ಸೋಂಕು ತಗುಲಿರುವುದು ಎಲ್ಲಿಯೂ ವರದಿಯಾಗಿಲ್ಲ. ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ ಒಂದು ತಿಂಗಳ ಹಿಂದೆ ಕೊರೋನಾ ಸೋಂಕು ತಗುಲಿತ್ತು. ಅವರೀಗ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಆರೋಗ್ಯದಿಂದಿದ್ದಾರೆ. ಈ ಅವಧಿಯಲ್ಲಿ ಶಾಲೆಯ ಬೇರೆ ಯಾವುದೇ ಶಿಕ್ಷಕರಿಗೆ ಯಾವುದೇ ರೀತಿಯ ಸೋಂಕು ತಗುಲಿರುವುದಿಲ್ಲ ಎಂದಿದ್ದಾರೆ.

ಸೆಪ್ಟೆಂಬರ್ 22ರಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರ್ಯಾಂಡಮ್ ಆಗಿ ಸುಮಾರು 200 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲಾಗಿದೆ. ಅದರಲ್ಲಿ 4 ಮಕ್ಕಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಶಾಲೆಯ ಆವರಣದಲ್ಲಿ ಈ ವಿದ್ಯಾರ್ಥಿಗಳಿಗೆ ಸೋಂಕು ತಗುಲಿಲ್ಲ ಎಂದು ಸ್ಥಳೀಯ ಜಿಲ್ಲಾ ಉಪನಿರ್ದೇಶಕರು ಖಚಿತಪಡಿಸಿದ್ದಾರೆ.

ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿದ್ಯಾಗಮ ಯೋಜನೆಯ ಕಾರಣಕ್ಕೆ ಶಿಕ್ಷಕರಿಗೆ ಕೊರೋನಾ ಸೋಂಕು ಹೊಂದಿರುವ ರೀತಿಯಲ್ಲಿ ಬಿಂಬಿಸುವುದು ನಾವು ವಿದ್ಯಾರ್ಥಿ ಸಮೂಹಕ್ಕೆ ಎಸಗುವ ಅನ್ಯಾಯವಾಗಿದೆ. ಈಗಾಗಲೇ ಸಾಮಾಜಿಕ ಪಿಡುಗುಗಳು ಹೆಚ್ಚುತ್ತಿವೆ. ಈ ನಡುವೆ ವಿದ್ಯಾರ್ಥಿಗಳನ್ನ ಸುರಕ್ಷಿತ ವಾತಾವರಣದಲ್ಲಿ ಕಲಿಕೆಗೆ ತೊಡಗಿಸಿಕೊಳ್ಳದೇ ಹೋದಲ್ಲಿಲ ಮಕ್ಕಳ ಭವಿಷ್ಯಕ್ಕೆ ಅಪಚಾರವಾದಂತಾಗುತ್ತದೆ. ಎಲ್ಲಾ ಸುರಕ್ಷಿತ ಕ್ರಮಗಳೊಂದಿಗೆ ಶಾಲೆಗಳಲ್ಲಿ ಕಲಿಕೆ ಮುಂದುವರಿದಿದೆ. ನಿಗದಿತ ಕನಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು ಸೂಚಿತ ಶಿಕ್ಷಕರ ಮಾರ್ಗದರ್ಶನದಡಿ ಕಲಿಕೆ ಮುಂದುವರಿಸುತ್ತಾರೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ರಾಜ್ಯದ ಯಾವುದೇ ಶಾಲೆಯಲ್ಲಿಯೂ ವಿದ್ಯಾಗಮ ಯೋಜನೆಯ ದುರುಪಯೋಗ ಆಗುತ್ತಿಲ್ಲ. ಕಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ತರಬೇತಿ ಹೊಂದಿದ ವೃತ್ತಿಪರರಾಗಿದ್ದಾರೆ. ಹಾಗೆಯೇ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಹಾಗೂ ಸೂಕ್ತ ಅರ್ಹತೆ ಹೊಂದಿದವರಾಗಿದ್ದಾರೆ. ಈ ವಿದ್ಯಾಗಮದಂತಹ ಮಹತ್ವದ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಸಲ್ಲದು ಎಂದು ಸುರೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024