ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ 3 ಲಕ್ಷ ನಗದು, ಚಿನ್ನ ಬೆಂಕಿಗಾಹುತಿಯಾಗಿ
ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಬಡಮಲ್ಲಿ ತಾಂಡಾದಲ್ಲಿ ನಡೆದಿದೆ.
ಗ್ರಾಮದ ಅಂಗನವಾಡಿ ಸಹಾಯಕಿ ವಿನೋದಾ ಎಂಬುವರು ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ. ದೇವರ ಮುಂದೆ ದೀಪ ಹಚ್ಚಿಟ್ಟು ಅಂಗನವಾಡಿಗೆ ಕೆಲಸಕ್ಕೆ ಹೋಗಿದ್ದರು.
ಕೆಲ ಹೊತ್ತಿನಲ್ಲಿ ದೀಪದ ಬೆಂಕಿ ಗುಡಿಸಲಿಗೆ ಆವರಿಸಿ ಗುಡಿಸಲಿನಲ್ಲಿದ್ದ ಮೂರು ಲಕ್ಷ ನಗದು ಹಣ ಮತ್ತು ಐವತ್ತು ಗ್ರಾಂ ತೂಕದ ಚಿನ್ನಾಭರಣ ಬೆಂಕಿಗೆ ಆಹುತಿಯಾಗಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಹೊಸ ಮನೆಯ ನಿರ್ಮಾಣಕ್ಕಾಗಿ ಮನೆಯಲ್ಲಿ ಹಣವನ್ನು ಕೂಡಿ ಇಟ್ಟಿದ್ದರು. ಅದರೆ ಬೆಂಕಿಗೆ ಮನೆಯಲ್ಲಿ ಇದ್ದ ನಗದು ಸುಟ್ಟು ಇಡೀ ಕುಟುಂಬವೇ ಕಣ್ಣೀರು ಹಾಕುತ್ತಿದೆ.
ಸ್ಥಳಕ್ಕೆ ಕಾಗಿನೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು