ಒಂದು ಬಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದಳು. ಈ ಬಾರಿ ಆಕೆಯ ಸಾವನ್ನು ತಡೆಯಲು ಆಗಲೇ ಇಲ್ಲ. ವೈದ್ಯಕೀಯ ವಿದ್ಯಾರ್ಥಿನಿ ಕೊನೆಗೂ ಆತ್ಮಹತ್ಯೆ ಮಾಡಿಕೊಂಡಳು.
ಶಿವಮೊಗ್ಗ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಲಲಿತಾ (23) ಎಂಬಾಕೆಯ ಆತ್ಮಹತ್ಯೆ ಮಾಡಿಕೊಂಡ ಯುವತಿ.
ತಂದೆ ವೆಂಕಟೇಶ್ ಶಿಕ್ಷಕರು ಭದ್ರಾವತಿಯಲ್ಲಿ ವಾಸವಾಗಿದ್ದಾರೆ. ಲಲಿತಾ ಮಾತ್ರ ಶಿವಮೊಗ್ಗದ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಲ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಈ ಹಿಂದೆಯೂ ಲಲಿತಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಬದುಕುಳಿದಿದ್ದಳು. ನಿನ್ನೆ ರಾತ್ರಿ ಬಹು ಹೊತ್ತಿನ ತನಕ ಓದುತ್ತಿದ್ದ ಲಲಿತಾ
ಬೆಳಿಗ್ಗೆ ಆಗುವುದರೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಂದು ಬೆಳಗ್ಗೆ ಲಲಿತಾ ರೂಂ ನಿಂದ ಹೊರಗೆ ಬರಲೇ ಇಲ್ಲ. ಆಗ ಹಾಸ್ಟೆಲ್ ಅಧೀಕ್ಷರು ಪೊಲೀಸರ ಸಮ್ಮುಖದಲ್ಲಿ ಬಾಗಿಲು ಒಡೆದು ನೋಡಿದ್ದಾಗ ಲಲಿತಾ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಲಲಿತಾಳ ಸಾವಿಗೆ ಕಾರಣ ಏನೆಂಬುದು ಗೊತ್ತಾಗಿಲ್ಲ.
ದೊಡ್ಡ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು