ಆಂಧ್ರಪ್ರದೇಶದಲ್ಲಿ ಆಡಳಿತ ಸುಧಾರಣೆ ತರಲು ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ಬುಧವಾರ ಬೆಳಿಗ್ಗೆ 13 ಹೊಸ ಜಿಲ್ಲೆಗಳ ರಚನೆ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ.
ಆಡಳಿತವನ್ನು ಸರಾಗಗೊಳಿಸಲು ಮತ್ತು ಅಧಿಕಾರಿಗಳ ಪ್ರವೇಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಈಗಿರುವ 13 ಜಿಲ್ಲೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿದೆ. ಶ್ರೀ ಬಾಲಾಜಿ, ಅನ್ನಮಯ್ಯ, ಶ್ರೀ ಸತ್ಯಸಾಯಿ, ನಂದ್ಯಾಲ, ಬಾಪಟ್ಲ, ಪಲ್ನಾಡು, ಏಲೂರು, ಎನ್ಟಿಆರ್, ಅನಕಾಪಲ್ಲಿ, ಕಾಕಿನಾಡ, ಕೋನಾ ಸೀಮಾ, ಮಾನ್ಯಂ, ಅಲ್ಲೂರಿ ಸೀತಾರಾಮ ರಾಜು ನೂತನ ಜಿಲ್ಲೆಗಳಾಗಿವೆ
25 ಲೋಕಸಭಾ ಕ್ಷೇತ್ರಗಳನ್ನು ಪ್ರತಿಯೊಂದನ್ನು ಜಿಲ್ಲೆಯಾಗಿ ಪುನಾರಚಿಸಲಾಗಿದೆ. ಅರಕು ಕ್ಷೇತ್ರವನ್ನು ನಾಲ್ಕು ಕ್ಷೇತ್ರಗಳಾಗಿ ರಚಿಸಲಾಗಿದೆ.
ಆಂಧ್ರಪ್ರದೇಶ ಜಿಲ್ಲೆಗಳ ರಚನೆ ಕಾಯ್ದೆಯ ಸೆಕ್ಷನ್ 3(5) ಅಡಿ ಜಿಲ್ಲೆಗಳನ್ನು ರಚನೆ ಮಾಡಲಾಗಿದೆ , ಈ ಮೂಲಕ ಆಂಧ್ರಪ್ರದೇಶದಲ್ಲಿರುವ ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ